ಒಮಿಕ್ರಾನ್ ಹೊಸ ರೂಪಾಂತರವನ್ನು ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು ಹಂಚಿಕೊಂಡರು. ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.
ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.