ಒಮಿಕ್ರಾನ್ ಹೊಸ ರೂಪಾಂತರವನ್ನು ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು ಹಂಚಿಕೊಂಡರು. ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.
ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…