ಒಮಿಕ್ರಾನ್ ಹೊಸ ರೂಪಾಂತರವನ್ನು ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು ಹಂಚಿಕೊಂಡರು. ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.
ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…