Advertisement
MIRROR FOCUS

ಒಮಿಕ್ರಾನ್ ವಿರುದ್ಧ ಹೋರಾಡಲು “ಸ್ವಯಂಅರಿವು – ಸ್ವಯಂಶಿಸ್ತು” ಅವಶ್ಯಕತೆಯಿದೆ ಎಂದ ಪ್ರಧಾನಿ ನರೇಂದ್ರ ಮೋದಿ |

Share

ಒಮಿಕ್ರಾನ್‌ ಹೊಸ ರೂಪಾಂತರವನ್ನು  ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು  ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು  ಹಂಚಿಕೊಂಡರು.  ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್‌ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.

ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್‌ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

2 minutes ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

3 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

5 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

9 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

13 hours ago