ಒಮಿಕ್ರಾನ್ ಹೊಸ ರೂಪಾಂತರವನ್ನು ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು ಹಂಚಿಕೊಂಡರು. ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.
ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…