ಒಮಿಕ್ರಾನ್ ಹೊಸ ರೂಪಾಂತರವನ್ನು ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು ಹಂಚಿಕೊಂಡರು. ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.
ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…