Advertisement
MIRROR FOCUS

ಒಮಿಕ್ರಾನ್ ವಿರುದ್ಧ ಹೋರಾಡಲು “ಸ್ವಯಂಅರಿವು – ಸ್ವಯಂಶಿಸ್ತು” ಅವಶ್ಯಕತೆಯಿದೆ ಎಂದ ಪ್ರಧಾನಿ ನರೇಂದ್ರ ಮೋದಿ |

Share

ಒಮಿಕ್ರಾನ್‌ ಹೊಸ ರೂಪಾಂತರವನ್ನು  ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು  ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು  ಹಂಚಿಕೊಂಡರು.  ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್‌ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.

ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್‌ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

9 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

9 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

9 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

9 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

9 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

17 hours ago