ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |

March 30, 2025
10:20 PM
ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು ಹೊಸದಾಗಿ ನಿರ್ಮಿಸಲಾದ ಟ್ಯಾಂಕ್‌ಗಳು, ಕೊಳಗಳು ಮತ್ತು ಇತರ ನೀರಿನ ಪುನರ್‌ ಭರ್ತಿ ರಚನೆಗಳ ಮೂಲಕ ನೀರನ್ನು ಸಂರಕ್ಷಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಳೆ ನೀರನ್ನು ಸಂರಕ್ಷಿಸುವ ಮೂಲಕ ನಾವು ಬಹಳಷ್ಟು ನೀರನ್ನು ವ್ಯರ್ಥವಾಗುವುದನ್ನು ತಪ್ಪಿಸಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದದಲ್ಲಿ ತಿಳಿಸಿದ್ದಾರೆ.  ಇದೇ ವೇಳೆ ಗದಗ ಜಿಲ್ಲೆಯ ಗ್ರಾಮಸ್ಥರ ನೀರು ಸಂರಕ್ಷಣೆ ಕುರಿತ ಕ್ರಮದ ಕುರಿತು ಉಲ್ಲೇಖಿಸಿದರು. ……..ಮುಂದೆ ಓದಿ…..

ದೇಶದ ಹಲವು ಭಾಗಗಳಲ್ಲಿ ನೀರಿನ ಸಂರಕ್ಷಣೆಗಾಗಿ ಅಭೂತಪೂರ್ವ ಕೆಲಸ ಮಾಡಲಾಗಿದೆ. ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು ಹೊಸದಾಗಿ ನಿರ್ಮಿಸಲಾದ ಟ್ಯಾಂಕ್‌ಗಳು, ಕೊಳಗಳು ಮತ್ತು ಇತರ ನೀರಿನ ಪುನರ್‌ ಭರ್ತಿ ರಚನೆಗಳ ಮೂಲಕ ನೀರನ್ನು ಸಂರಕ್ಷಿಸಲಾಗಿದೆ ಎಂದರು.

ಕರ್ನಾಟಕ ರಾಜ್ಯದ ಗದಗ ಜಿಲ್ಲೆಯ ಜನರು ರೂಪಿಸಿರುವ ಒಂದು ಮಾದರಿ ಕುರಿತು ಮಾಹಿತಿ ಹಂಚಿಕೊಂಡ ಪ್ರಧಾನಿ, ಕೆಲವು ವರ್ಷಗಳ ಹಿಂದೆ, ಇಲ್ಲಿನ ಎರಡು ಹಳ್ಳಿಗಳ ಕೆರೆಗಳು ಸಂಪೂರ್ಣವಾಗಿ ಬತ್ತಿಹೋಗಿದ್ದವು. ಪ್ರಾಣಿಗಳಿಗೂ ಕುಡಿಯಲು ನೀರು ಇಲ್ಲದಂತಾಗಿತ್ತು. ಕ್ರಮೇಣ ಆ ಕೆರೆ, ಹುಲ್ಲು ಮತ್ತು ಕಸಕಡ್ಡಿಗಳಿಂದ ತುಂಬಿಹೋಯಿತು. ಆದರೆ ಕೆಲವು ಗ್ರಾಮಸ್ಥರು, ಮನಸ್ಸಿದ್ದಲ್ಲಿ ಮಾರ್ಗ ಎಂಬ ಮಾತಿನಂತೆ ಕೆರೆ ಪುನರುಜ್ಜೀವನಗೊಳಿಸಲು ನಿರ್ಧರಿಸಿ, ಕಾರ್ಯ ಪ್ರವೃತ್ತರಾದರು. ಗ್ರಾಮಸ್ಥರ ಈ ಪ್ರಯತ್ನವನ್ನು ನೋಡಿ, ಸುತ್ತಮುತ್ತಲ ಸಾಮಾಜಿಕ ಸಂಸ್ಥೆಗಳು ಸಹ ಅವರೊಂದಿಗೆ ಕೈಜೋಡಿಸಿದವು. ಎಲ್ಲರೂ ಒಗ್ಗೂಡಿ ಕಸಕಡ್ಡಿ ಸ್ವಚ್ಛಗೊಳಿಸಿ, ಹೂಳೆತ್ತುವ ಕೆಲಸ ಮಾಡಿದರು.  ಕೆಲ ಸಮಯದ ನಂತರ ಕೆರೆ ಪ್ರದೇಶವು ಪುನರುಜ್ಜೀನಗೊಂಡಿತು ಎಂದು ಶ್ಲಾಘಿಸಿದರು.  ನಿಜಕ್ಕೂ, ಇದು `catch the rain’  ಅಭಿಯಾನದ ಒಂದು ಉತ್ತಮ ಉದಾಹರಣೆಯಾಗಿದೆ. ಸಮುದಾಯ ಮಟ್ಟದಲ್ಲಿ ಇಂತಹ ಪ್ರಯತ್ನಗಳಿಗೆ ಎಲ್ಲರೂ ಕೈಜೋಡಿಸಬಹುದು. ನಿಮ್ಮ ಮನೆಯ ಛಾವಣಿ ಅಥವಾ ಅಂಗಳದಲ್ಲಿ ಪಕ್ಷಿಗಳಿಗೆ ನೀರನ್ನು ಇರಿಸಿ ಎಂದು ಅವರು ಸಲಹೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror