The Rural Mirror ಕಾಳಜಿ

ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆ ನೀರನ್ನು ಸಂರಕ್ಷಿಸುವ ಮೂಲಕ ನಾವು ಬಹಳಷ್ಟು ನೀರನ್ನು ವ್ಯರ್ಥವಾಗುವುದನ್ನು ತಪ್ಪಿಸಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದದಲ್ಲಿ ತಿಳಿಸಿದ್ದಾರೆ.  ಇದೇ ವೇಳೆ ಗದಗ ಜಿಲ್ಲೆಯ ಗ್ರಾಮಸ್ಥರ ನೀರು ಸಂರಕ್ಷಣೆ ಕುರಿತ ಕ್ರಮದ ಕುರಿತು ಉಲ್ಲೇಖಿಸಿದರು. ……..ಮುಂದೆ ಓದಿ…..

Advertisement
Advertisement

ದೇಶದ ಹಲವು ಭಾಗಗಳಲ್ಲಿ ನೀರಿನ ಸಂರಕ್ಷಣೆಗಾಗಿ ಅಭೂತಪೂರ್ವ ಕೆಲಸ ಮಾಡಲಾಗಿದೆ. ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು ಹೊಸದಾಗಿ ನಿರ್ಮಿಸಲಾದ ಟ್ಯಾಂಕ್‌ಗಳು, ಕೊಳಗಳು ಮತ್ತು ಇತರ ನೀರಿನ ಪುನರ್‌ ಭರ್ತಿ ರಚನೆಗಳ ಮೂಲಕ ನೀರನ್ನು ಸಂರಕ್ಷಿಸಲಾಗಿದೆ ಎಂದರು.

ಕರ್ನಾಟಕ ರಾಜ್ಯದ ಗದಗ ಜಿಲ್ಲೆಯ ಜನರು ರೂಪಿಸಿರುವ ಒಂದು ಮಾದರಿ ಕುರಿತು ಮಾಹಿತಿ ಹಂಚಿಕೊಂಡ ಪ್ರಧಾನಿ, ಕೆಲವು ವರ್ಷಗಳ ಹಿಂದೆ, ಇಲ್ಲಿನ ಎರಡು ಹಳ್ಳಿಗಳ ಕೆರೆಗಳು ಸಂಪೂರ್ಣವಾಗಿ ಬತ್ತಿಹೋಗಿದ್ದವು. ಪ್ರಾಣಿಗಳಿಗೂ ಕುಡಿಯಲು ನೀರು ಇಲ್ಲದಂತಾಗಿತ್ತು. ಕ್ರಮೇಣ ಆ ಕೆರೆ, ಹುಲ್ಲು ಮತ್ತು ಕಸಕಡ್ಡಿಗಳಿಂದ ತುಂಬಿಹೋಯಿತು. ಆದರೆ ಕೆಲವು ಗ್ರಾಮಸ್ಥರು, ಮನಸ್ಸಿದ್ದಲ್ಲಿ ಮಾರ್ಗ ಎಂಬ ಮಾತಿನಂತೆ ಕೆರೆ ಪುನರುಜ್ಜೀವನಗೊಳಿಸಲು ನಿರ್ಧರಿಸಿ, ಕಾರ್ಯ ಪ್ರವೃತ್ತರಾದರು. ಗ್ರಾಮಸ್ಥರ ಈ ಪ್ರಯತ್ನವನ್ನು ನೋಡಿ, ಸುತ್ತಮುತ್ತಲ ಸಾಮಾಜಿಕ ಸಂಸ್ಥೆಗಳು ಸಹ ಅವರೊಂದಿಗೆ ಕೈಜೋಡಿಸಿದವು. ಎಲ್ಲರೂ ಒಗ್ಗೂಡಿ ಕಸಕಡ್ಡಿ ಸ್ವಚ್ಛಗೊಳಿಸಿ, ಹೂಳೆತ್ತುವ ಕೆಲಸ ಮಾಡಿದರು.  ಕೆಲ ಸಮಯದ ನಂತರ ಕೆರೆ ಪ್ರದೇಶವು ಪುನರುಜ್ಜೀನಗೊಂಡಿತು ಎಂದು ಶ್ಲಾಘಿಸಿದರು.  ನಿಜಕ್ಕೂ, ಇದು `catch the rain’  ಅಭಿಯಾನದ ಒಂದು ಉತ್ತಮ ಉದಾಹರಣೆಯಾಗಿದೆ. ಸಮುದಾಯ ಮಟ್ಟದಲ್ಲಿ ಇಂತಹ ಪ್ರಯತ್ನಗಳಿಗೆ ಎಲ್ಲರೂ ಕೈಜೋಡಿಸಬಹುದು. ನಿಮ್ಮ ಮನೆಯ ಛಾವಣಿ ಅಥವಾ ಅಂಗಳದಲ್ಲಿ ಪಕ್ಷಿಗಳಿಗೆ ನೀರನ್ನು ಇರಿಸಿ ಎಂದು ಅವರು ಸಲಹೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

3 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ…

3 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…

4 hours ago

ಮನ ಗೆಲ್ಲುವ ಮಾವಿನ ಹಣ್ಣುಗಳು

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…

4 hours ago

ಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳು

ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…

5 hours ago

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…

5 hours ago