Advertisement
The Rural Mirror ಕಾಳಜಿ

ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |

Share

ಮಳೆ ನೀರನ್ನು ಸಂರಕ್ಷಿಸುವ ಮೂಲಕ ನಾವು ಬಹಳಷ್ಟು ನೀರನ್ನು ವ್ಯರ್ಥವಾಗುವುದನ್ನು ತಪ್ಪಿಸಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದದಲ್ಲಿ ತಿಳಿಸಿದ್ದಾರೆ.  ಇದೇ ವೇಳೆ ಗದಗ ಜಿಲ್ಲೆಯ ಗ್ರಾಮಸ್ಥರ ನೀರು ಸಂರಕ್ಷಣೆ ಕುರಿತ ಕ್ರಮದ ಕುರಿತು ಉಲ್ಲೇಖಿಸಿದರು. ……..ಮುಂದೆ ಓದಿ…..

ದೇಶದ ಹಲವು ಭಾಗಗಳಲ್ಲಿ ನೀರಿನ ಸಂರಕ್ಷಣೆಗಾಗಿ ಅಭೂತಪೂರ್ವ ಕೆಲಸ ಮಾಡಲಾಗಿದೆ. ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು ಹೊಸದಾಗಿ ನಿರ್ಮಿಸಲಾದ ಟ್ಯಾಂಕ್‌ಗಳು, ಕೊಳಗಳು ಮತ್ತು ಇತರ ನೀರಿನ ಪುನರ್‌ ಭರ್ತಿ ರಚನೆಗಳ ಮೂಲಕ ನೀರನ್ನು ಸಂರಕ್ಷಿಸಲಾಗಿದೆ ಎಂದರು.

ಕರ್ನಾಟಕ ರಾಜ್ಯದ ಗದಗ ಜಿಲ್ಲೆಯ ಜನರು ರೂಪಿಸಿರುವ ಒಂದು ಮಾದರಿ ಕುರಿತು ಮಾಹಿತಿ ಹಂಚಿಕೊಂಡ ಪ್ರಧಾನಿ, ಕೆಲವು ವರ್ಷಗಳ ಹಿಂದೆ, ಇಲ್ಲಿನ ಎರಡು ಹಳ್ಳಿಗಳ ಕೆರೆಗಳು ಸಂಪೂರ್ಣವಾಗಿ ಬತ್ತಿಹೋಗಿದ್ದವು. ಪ್ರಾಣಿಗಳಿಗೂ ಕುಡಿಯಲು ನೀರು ಇಲ್ಲದಂತಾಗಿತ್ತು. ಕ್ರಮೇಣ ಆ ಕೆರೆ, ಹುಲ್ಲು ಮತ್ತು ಕಸಕಡ್ಡಿಗಳಿಂದ ತುಂಬಿಹೋಯಿತು. ಆದರೆ ಕೆಲವು ಗ್ರಾಮಸ್ಥರು, ಮನಸ್ಸಿದ್ದಲ್ಲಿ ಮಾರ್ಗ ಎಂಬ ಮಾತಿನಂತೆ ಕೆರೆ ಪುನರುಜ್ಜೀವನಗೊಳಿಸಲು ನಿರ್ಧರಿಸಿ, ಕಾರ್ಯ ಪ್ರವೃತ್ತರಾದರು. ಗ್ರಾಮಸ್ಥರ ಈ ಪ್ರಯತ್ನವನ್ನು ನೋಡಿ, ಸುತ್ತಮುತ್ತಲ ಸಾಮಾಜಿಕ ಸಂಸ್ಥೆಗಳು ಸಹ ಅವರೊಂದಿಗೆ ಕೈಜೋಡಿಸಿದವು. ಎಲ್ಲರೂ ಒಗ್ಗೂಡಿ ಕಸಕಡ್ಡಿ ಸ್ವಚ್ಛಗೊಳಿಸಿ, ಹೂಳೆತ್ತುವ ಕೆಲಸ ಮಾಡಿದರು.  ಕೆಲ ಸಮಯದ ನಂತರ ಕೆರೆ ಪ್ರದೇಶವು ಪುನರುಜ್ಜೀನಗೊಂಡಿತು ಎಂದು ಶ್ಲಾಘಿಸಿದರು.  ನಿಜಕ್ಕೂ, ಇದು `catch the rain’  ಅಭಿಯಾನದ ಒಂದು ಉತ್ತಮ ಉದಾಹರಣೆಯಾಗಿದೆ. ಸಮುದಾಯ ಮಟ್ಟದಲ್ಲಿ ಇಂತಹ ಪ್ರಯತ್ನಗಳಿಗೆ ಎಲ್ಲರೂ ಕೈಜೋಡಿಸಬಹುದು. ನಿಮ್ಮ ಮನೆಯ ಛಾವಣಿ ಅಥವಾ ಅಂಗಳದಲ್ಲಿ ಪಕ್ಷಿಗಳಿಗೆ ನೀರನ್ನು ಇರಿಸಿ ಎಂದು ಅವರು ಸಲಹೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

10 minutes ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

18 minutes ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

52 minutes ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

1 hour ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

1 hour ago

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅಳಿವಿನ ಅಂಚಿನಲ್ಲಿರುವ ಅಪರೂಪದ ಕಾಡು ಮೇಕೆ

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅತ್ಯಂತ  ಗಮನ ಸೆಳೆಯುವ ಪೀರ್ ಪಂಜಾಲ್ ಪರ್ವತಶ್ರೇಣಿಯಲ್ಲಿ ಕಡಿದಾದ…

1 hour ago