Advertisement
The Rural Mirror ಕಾಳಜಿ

ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |

Share

ಮಳೆ ನೀರನ್ನು ಸಂರಕ್ಷಿಸುವ ಮೂಲಕ ನಾವು ಬಹಳಷ್ಟು ನೀರನ್ನು ವ್ಯರ್ಥವಾಗುವುದನ್ನು ತಪ್ಪಿಸಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದದಲ್ಲಿ ತಿಳಿಸಿದ್ದಾರೆ.  ಇದೇ ವೇಳೆ ಗದಗ ಜಿಲ್ಲೆಯ ಗ್ರಾಮಸ್ಥರ ನೀರು ಸಂರಕ್ಷಣೆ ಕುರಿತ ಕ್ರಮದ ಕುರಿತು ಉಲ್ಲೇಖಿಸಿದರು. ……..ಮುಂದೆ ಓದಿ…..

ದೇಶದ ಹಲವು ಭಾಗಗಳಲ್ಲಿ ನೀರಿನ ಸಂರಕ್ಷಣೆಗಾಗಿ ಅಭೂತಪೂರ್ವ ಕೆಲಸ ಮಾಡಲಾಗಿದೆ. ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು ಹೊಸದಾಗಿ ನಿರ್ಮಿಸಲಾದ ಟ್ಯಾಂಕ್‌ಗಳು, ಕೊಳಗಳು ಮತ್ತು ಇತರ ನೀರಿನ ಪುನರ್‌ ಭರ್ತಿ ರಚನೆಗಳ ಮೂಲಕ ನೀರನ್ನು ಸಂರಕ್ಷಿಸಲಾಗಿದೆ ಎಂದರು.

ಕರ್ನಾಟಕ ರಾಜ್ಯದ ಗದಗ ಜಿಲ್ಲೆಯ ಜನರು ರೂಪಿಸಿರುವ ಒಂದು ಮಾದರಿ ಕುರಿತು ಮಾಹಿತಿ ಹಂಚಿಕೊಂಡ ಪ್ರಧಾನಿ, ಕೆಲವು ವರ್ಷಗಳ ಹಿಂದೆ, ಇಲ್ಲಿನ ಎರಡು ಹಳ್ಳಿಗಳ ಕೆರೆಗಳು ಸಂಪೂರ್ಣವಾಗಿ ಬತ್ತಿಹೋಗಿದ್ದವು. ಪ್ರಾಣಿಗಳಿಗೂ ಕುಡಿಯಲು ನೀರು ಇಲ್ಲದಂತಾಗಿತ್ತು. ಕ್ರಮೇಣ ಆ ಕೆರೆ, ಹುಲ್ಲು ಮತ್ತು ಕಸಕಡ್ಡಿಗಳಿಂದ ತುಂಬಿಹೋಯಿತು. ಆದರೆ ಕೆಲವು ಗ್ರಾಮಸ್ಥರು, ಮನಸ್ಸಿದ್ದಲ್ಲಿ ಮಾರ್ಗ ಎಂಬ ಮಾತಿನಂತೆ ಕೆರೆ ಪುನರುಜ್ಜೀವನಗೊಳಿಸಲು ನಿರ್ಧರಿಸಿ, ಕಾರ್ಯ ಪ್ರವೃತ್ತರಾದರು. ಗ್ರಾಮಸ್ಥರ ಈ ಪ್ರಯತ್ನವನ್ನು ನೋಡಿ, ಸುತ್ತಮುತ್ತಲ ಸಾಮಾಜಿಕ ಸಂಸ್ಥೆಗಳು ಸಹ ಅವರೊಂದಿಗೆ ಕೈಜೋಡಿಸಿದವು. ಎಲ್ಲರೂ ಒಗ್ಗೂಡಿ ಕಸಕಡ್ಡಿ ಸ್ವಚ್ಛಗೊಳಿಸಿ, ಹೂಳೆತ್ತುವ ಕೆಲಸ ಮಾಡಿದರು.  ಕೆಲ ಸಮಯದ ನಂತರ ಕೆರೆ ಪ್ರದೇಶವು ಪುನರುಜ್ಜೀನಗೊಂಡಿತು ಎಂದು ಶ್ಲಾಘಿಸಿದರು.  ನಿಜಕ್ಕೂ, ಇದು `catch the rain’  ಅಭಿಯಾನದ ಒಂದು ಉತ್ತಮ ಉದಾಹರಣೆಯಾಗಿದೆ. ಸಮುದಾಯ ಮಟ್ಟದಲ್ಲಿ ಇಂತಹ ಪ್ರಯತ್ನಗಳಿಗೆ ಎಲ್ಲರೂ ಕೈಜೋಡಿಸಬಹುದು. ನಿಮ್ಮ ಮನೆಯ ಛಾವಣಿ ಅಥವಾ ಅಂಗಳದಲ್ಲಿ ಪಕ್ಷಿಗಳಿಗೆ ನೀರನ್ನು ಇರಿಸಿ ಎಂದು ಅವರು ಸಲಹೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

12 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago