Advertisement
The Rural Mirror ಕಾಳಜಿ

ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |

Share

ಮಳೆ ನೀರನ್ನು ಸಂರಕ್ಷಿಸುವ ಮೂಲಕ ನಾವು ಬಹಳಷ್ಟು ನೀರನ್ನು ವ್ಯರ್ಥವಾಗುವುದನ್ನು ತಪ್ಪಿಸಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದದಲ್ಲಿ ತಿಳಿಸಿದ್ದಾರೆ.  ಇದೇ ವೇಳೆ ಗದಗ ಜಿಲ್ಲೆಯ ಗ್ರಾಮಸ್ಥರ ನೀರು ಸಂರಕ್ಷಣೆ ಕುರಿತ ಕ್ರಮದ ಕುರಿತು ಉಲ್ಲೇಖಿಸಿದರು. ……..ಮುಂದೆ ಓದಿ…..

ದೇಶದ ಹಲವು ಭಾಗಗಳಲ್ಲಿ ನೀರಿನ ಸಂರಕ್ಷಣೆಗಾಗಿ ಅಭೂತಪೂರ್ವ ಕೆಲಸ ಮಾಡಲಾಗಿದೆ. ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು ಹೊಸದಾಗಿ ನಿರ್ಮಿಸಲಾದ ಟ್ಯಾಂಕ್‌ಗಳು, ಕೊಳಗಳು ಮತ್ತು ಇತರ ನೀರಿನ ಪುನರ್‌ ಭರ್ತಿ ರಚನೆಗಳ ಮೂಲಕ ನೀರನ್ನು ಸಂರಕ್ಷಿಸಲಾಗಿದೆ ಎಂದರು.

ಕರ್ನಾಟಕ ರಾಜ್ಯದ ಗದಗ ಜಿಲ್ಲೆಯ ಜನರು ರೂಪಿಸಿರುವ ಒಂದು ಮಾದರಿ ಕುರಿತು ಮಾಹಿತಿ ಹಂಚಿಕೊಂಡ ಪ್ರಧಾನಿ, ಕೆಲವು ವರ್ಷಗಳ ಹಿಂದೆ, ಇಲ್ಲಿನ ಎರಡು ಹಳ್ಳಿಗಳ ಕೆರೆಗಳು ಸಂಪೂರ್ಣವಾಗಿ ಬತ್ತಿಹೋಗಿದ್ದವು. ಪ್ರಾಣಿಗಳಿಗೂ ಕುಡಿಯಲು ನೀರು ಇಲ್ಲದಂತಾಗಿತ್ತು. ಕ್ರಮೇಣ ಆ ಕೆರೆ, ಹುಲ್ಲು ಮತ್ತು ಕಸಕಡ್ಡಿಗಳಿಂದ ತುಂಬಿಹೋಯಿತು. ಆದರೆ ಕೆಲವು ಗ್ರಾಮಸ್ಥರು, ಮನಸ್ಸಿದ್ದಲ್ಲಿ ಮಾರ್ಗ ಎಂಬ ಮಾತಿನಂತೆ ಕೆರೆ ಪುನರುಜ್ಜೀವನಗೊಳಿಸಲು ನಿರ್ಧರಿಸಿ, ಕಾರ್ಯ ಪ್ರವೃತ್ತರಾದರು. ಗ್ರಾಮಸ್ಥರ ಈ ಪ್ರಯತ್ನವನ್ನು ನೋಡಿ, ಸುತ್ತಮುತ್ತಲ ಸಾಮಾಜಿಕ ಸಂಸ್ಥೆಗಳು ಸಹ ಅವರೊಂದಿಗೆ ಕೈಜೋಡಿಸಿದವು. ಎಲ್ಲರೂ ಒಗ್ಗೂಡಿ ಕಸಕಡ್ಡಿ ಸ್ವಚ್ಛಗೊಳಿಸಿ, ಹೂಳೆತ್ತುವ ಕೆಲಸ ಮಾಡಿದರು.  ಕೆಲ ಸಮಯದ ನಂತರ ಕೆರೆ ಪ್ರದೇಶವು ಪುನರುಜ್ಜೀನಗೊಂಡಿತು ಎಂದು ಶ್ಲಾಘಿಸಿದರು.  ನಿಜಕ್ಕೂ, ಇದು `catch the rain’  ಅಭಿಯಾನದ ಒಂದು ಉತ್ತಮ ಉದಾಹರಣೆಯಾಗಿದೆ. ಸಮುದಾಯ ಮಟ್ಟದಲ್ಲಿ ಇಂತಹ ಪ್ರಯತ್ನಗಳಿಗೆ ಎಲ್ಲರೂ ಕೈಜೋಡಿಸಬಹುದು. ನಿಮ್ಮ ಮನೆಯ ಛಾವಣಿ ಅಥವಾ ಅಂಗಳದಲ್ಲಿ ಪಕ್ಷಿಗಳಿಗೆ ನೀರನ್ನು ಇರಿಸಿ ಎಂದು ಅವರು ಸಲಹೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

4 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

6 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

6 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

8 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

13 hours ago