Advertisement
The Rural Mirror ಕಾಳಜಿ

ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |

Share

ಮಳೆ ನೀರನ್ನು ಸಂರಕ್ಷಿಸುವ ಮೂಲಕ ನಾವು ಬಹಳಷ್ಟು ನೀರನ್ನು ವ್ಯರ್ಥವಾಗುವುದನ್ನು ತಪ್ಪಿಸಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದದಲ್ಲಿ ತಿಳಿಸಿದ್ದಾರೆ.  ಇದೇ ವೇಳೆ ಗದಗ ಜಿಲ್ಲೆಯ ಗ್ರಾಮಸ್ಥರ ನೀರು ಸಂರಕ್ಷಣೆ ಕುರಿತ ಕ್ರಮದ ಕುರಿತು ಉಲ್ಲೇಖಿಸಿದರು. ……..ಮುಂದೆ ಓದಿ…..

ದೇಶದ ಹಲವು ಭಾಗಗಳಲ್ಲಿ ನೀರಿನ ಸಂರಕ್ಷಣೆಗಾಗಿ ಅಭೂತಪೂರ್ವ ಕೆಲಸ ಮಾಡಲಾಗಿದೆ. ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು ಹೊಸದಾಗಿ ನಿರ್ಮಿಸಲಾದ ಟ್ಯಾಂಕ್‌ಗಳು, ಕೊಳಗಳು ಮತ್ತು ಇತರ ನೀರಿನ ಪುನರ್‌ ಭರ್ತಿ ರಚನೆಗಳ ಮೂಲಕ ನೀರನ್ನು ಸಂರಕ್ಷಿಸಲಾಗಿದೆ ಎಂದರು.

ಕರ್ನಾಟಕ ರಾಜ್ಯದ ಗದಗ ಜಿಲ್ಲೆಯ ಜನರು ರೂಪಿಸಿರುವ ಒಂದು ಮಾದರಿ ಕುರಿತು ಮಾಹಿತಿ ಹಂಚಿಕೊಂಡ ಪ್ರಧಾನಿ, ಕೆಲವು ವರ್ಷಗಳ ಹಿಂದೆ, ಇಲ್ಲಿನ ಎರಡು ಹಳ್ಳಿಗಳ ಕೆರೆಗಳು ಸಂಪೂರ್ಣವಾಗಿ ಬತ್ತಿಹೋಗಿದ್ದವು. ಪ್ರಾಣಿಗಳಿಗೂ ಕುಡಿಯಲು ನೀರು ಇಲ್ಲದಂತಾಗಿತ್ತು. ಕ್ರಮೇಣ ಆ ಕೆರೆ, ಹುಲ್ಲು ಮತ್ತು ಕಸಕಡ್ಡಿಗಳಿಂದ ತುಂಬಿಹೋಯಿತು. ಆದರೆ ಕೆಲವು ಗ್ರಾಮಸ್ಥರು, ಮನಸ್ಸಿದ್ದಲ್ಲಿ ಮಾರ್ಗ ಎಂಬ ಮಾತಿನಂತೆ ಕೆರೆ ಪುನರುಜ್ಜೀವನಗೊಳಿಸಲು ನಿರ್ಧರಿಸಿ, ಕಾರ್ಯ ಪ್ರವೃತ್ತರಾದರು. ಗ್ರಾಮಸ್ಥರ ಈ ಪ್ರಯತ್ನವನ್ನು ನೋಡಿ, ಸುತ್ತಮುತ್ತಲ ಸಾಮಾಜಿಕ ಸಂಸ್ಥೆಗಳು ಸಹ ಅವರೊಂದಿಗೆ ಕೈಜೋಡಿಸಿದವು. ಎಲ್ಲರೂ ಒಗ್ಗೂಡಿ ಕಸಕಡ್ಡಿ ಸ್ವಚ್ಛಗೊಳಿಸಿ, ಹೂಳೆತ್ತುವ ಕೆಲಸ ಮಾಡಿದರು.  ಕೆಲ ಸಮಯದ ನಂತರ ಕೆರೆ ಪ್ರದೇಶವು ಪುನರುಜ್ಜೀನಗೊಂಡಿತು ಎಂದು ಶ್ಲಾಘಿಸಿದರು.  ನಿಜಕ್ಕೂ, ಇದು `catch the rain’  ಅಭಿಯಾನದ ಒಂದು ಉತ್ತಮ ಉದಾಹರಣೆಯಾಗಿದೆ. ಸಮುದಾಯ ಮಟ್ಟದಲ್ಲಿ ಇಂತಹ ಪ್ರಯತ್ನಗಳಿಗೆ ಎಲ್ಲರೂ ಕೈಜೋಡಿಸಬಹುದು. ನಿಮ್ಮ ಮನೆಯ ಛಾವಣಿ ಅಥವಾ ಅಂಗಳದಲ್ಲಿ ಪಕ್ಷಿಗಳಿಗೆ ನೀರನ್ನು ಇರಿಸಿ ಎಂದು ಅವರು ಸಲಹೆ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

13 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

19 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago