ಮಳೆ ನೀರನ್ನು ಸಂರಕ್ಷಿಸುವ ಮೂಲಕ ನಾವು ಬಹಳಷ್ಟು ನೀರನ್ನು ವ್ಯರ್ಥವಾಗುವುದನ್ನು ತಪ್ಪಿಸಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದದಲ್ಲಿ ತಿಳಿಸಿದ್ದಾರೆ. ಇದೇ ವೇಳೆ ಗದಗ ಜಿಲ್ಲೆಯ ಗ್ರಾಮಸ್ಥರ ನೀರು ಸಂರಕ್ಷಣೆ ಕುರಿತ ಕ್ರಮದ ಕುರಿತು ಉಲ್ಲೇಖಿಸಿದರು. ……..ಮುಂದೆ ಓದಿ…..
ದೇಶದ ಹಲವು ಭಾಗಗಳಲ್ಲಿ ನೀರಿನ ಸಂರಕ್ಷಣೆಗಾಗಿ ಅಭೂತಪೂರ್ವ ಕೆಲಸ ಮಾಡಲಾಗಿದೆ. ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು ಹೊಸದಾಗಿ ನಿರ್ಮಿಸಲಾದ ಟ್ಯಾಂಕ್ಗಳು, ಕೊಳಗಳು ಮತ್ತು ಇತರ ನೀರಿನ ಪುನರ್ ಭರ್ತಿ ರಚನೆಗಳ ಮೂಲಕ ನೀರನ್ನು ಸಂರಕ್ಷಿಸಲಾಗಿದೆ ಎಂದರು.
ಕರ್ನಾಟಕ ರಾಜ್ಯದ ಗದಗ ಜಿಲ್ಲೆಯ ಜನರು ರೂಪಿಸಿರುವ ಒಂದು ಮಾದರಿ ಕುರಿತು ಮಾಹಿತಿ ಹಂಚಿಕೊಂಡ ಪ್ರಧಾನಿ, ಕೆಲವು ವರ್ಷಗಳ ಹಿಂದೆ, ಇಲ್ಲಿನ ಎರಡು ಹಳ್ಳಿಗಳ ಕೆರೆಗಳು ಸಂಪೂರ್ಣವಾಗಿ ಬತ್ತಿಹೋಗಿದ್ದವು. ಪ್ರಾಣಿಗಳಿಗೂ ಕುಡಿಯಲು ನೀರು ಇಲ್ಲದಂತಾಗಿತ್ತು. ಕ್ರಮೇಣ ಆ ಕೆರೆ, ಹುಲ್ಲು ಮತ್ತು ಕಸಕಡ್ಡಿಗಳಿಂದ ತುಂಬಿಹೋಯಿತು. ಆದರೆ ಕೆಲವು ಗ್ರಾಮಸ್ಥರು, ಮನಸ್ಸಿದ್ದಲ್ಲಿ ಮಾರ್ಗ ಎಂಬ ಮಾತಿನಂತೆ ಕೆರೆ ಪುನರುಜ್ಜೀವನಗೊಳಿಸಲು ನಿರ್ಧರಿಸಿ, ಕಾರ್ಯ ಪ್ರವೃತ್ತರಾದರು. ಗ್ರಾಮಸ್ಥರ ಈ ಪ್ರಯತ್ನವನ್ನು ನೋಡಿ, ಸುತ್ತಮುತ್ತಲ ಸಾಮಾಜಿಕ ಸಂಸ್ಥೆಗಳು ಸಹ ಅವರೊಂದಿಗೆ ಕೈಜೋಡಿಸಿದವು. ಎಲ್ಲರೂ ಒಗ್ಗೂಡಿ ಕಸಕಡ್ಡಿ ಸ್ವಚ್ಛಗೊಳಿಸಿ, ಹೂಳೆತ್ತುವ ಕೆಲಸ ಮಾಡಿದರು. ಕೆಲ ಸಮಯದ ನಂತರ ಕೆರೆ ಪ್ರದೇಶವು ಪುನರುಜ್ಜೀನಗೊಂಡಿತು ಎಂದು ಶ್ಲಾಘಿಸಿದರು. ನಿಜಕ್ಕೂ, ಇದು `catch the rain’ ಅಭಿಯಾನದ ಒಂದು ಉತ್ತಮ ಉದಾಹರಣೆಯಾಗಿದೆ. ಸಮುದಾಯ ಮಟ್ಟದಲ್ಲಿ ಇಂತಹ ಪ್ರಯತ್ನಗಳಿಗೆ ಎಲ್ಲರೂ ಕೈಜೋಡಿಸಬಹುದು. ನಿಮ್ಮ ಮನೆಯ ಛಾವಣಿ ಅಥವಾ ಅಂಗಳದಲ್ಲಿ ಪಕ್ಷಿಗಳಿಗೆ ನೀರನ್ನು ಇರಿಸಿ ಎಂದು ಅವರು ಸಲಹೆ ನೀಡಿದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…