ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕೃಷಿ ಸಮ್ಮಾನ್ ನಿಧಿಯ 18ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ದೇಶದ 9.4 ಕೋಟಿ ರೈತರ ಖಾತೆಗೆ ತಲಾ 2 ಸಾವಿರ ರೂ.ಗಳಂತೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ಪ್ರಧಾನಿ ಬಿಡುಗಡೆ ಮಾಡಿದ್ದಾರೆ.
ಈ ಯೋಜನೆಯಲ್ಲಿ ಕರ್ನಾಟಕ ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ರೂಪಾಯಿ ಜಮೆಯಾಗಿದೆ. ಮಹಾರಾಷ್ಟ್ರದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ವಾಶಿಮ್ನಲ್ಲಿ ಕೃಷಿ ಹಾಗೂ ಪಶು ಸಂಗೋಪನೆ ಇಲಾಖೆಗೆ ಸೇರಿದ 23 ಸಾವಿರ ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.
ಈ ವೇಳೆ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಹಾಗೂ ಮಹಾರಾಷ್ಟ್ರ ಸರಕಾರದ ‘ನಮೋ ಶೇಟ್ಕರಿ ಮಹಾಸನ್ಮಾನ್ ನಿಧಿ ಯೋಜನೆ’ಯ 5ನೇ ಕಂತಿನ ಹಣ ಬಿಡುಗಡೆ ಮಾಡಿದರು.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…