Advertisement
MIRROR FOCUS

ಪಿಎಂಶ್ರೀ ಯೋಜನೆ | ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಸರ್ಕಾರಿ ಶಾಲೆಯಲ್ಲಿ |

Share

ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾದ ಸೇವೆ ನೀಡುವ  ಯೋಜನೆಗಳಲ್ಲೊಂದಾದ ಪಿಎಂಶ್ರೀ ಯೋಜನೆಯು ಶಾಲಾ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪೂರಕವಾಗಿದೆ. ಈ ಯೋಜನೆಯನ್ನು ಬಳಸಿಕೊಂಡು ಉಡುಪಿ ಜಿಲ್ಲೆಯ ತೆಕ್ಕಟ್ಟೆಯ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.  …..ಮುಂದೆ ಓದಿ….

ಶಾಲಾ ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸಿ ಮಾದರಿ ಶಾಲೆಗಳನ್ನಾಗಿ ರೂಪುಗೊಳಿಸುವಲ್ಲಿ ಕೇಂದ್ರ ಸರಕಾರದ ಪಿಎಂಶ್ರೀ ಯೋಜನೆ ಸಹಕಾರಿಯಾಗಿದೆ. ದೇಶಾದ್ಯಂತ 14500 ಶಾಲೆಗಳನ್ನು ಅಧುನಿಕ ಸೌಕರ್ಯ ಮತ್ತು ಉತ್ತಮ ಪಠ್ಯಕ್ರಮ ಹಾಗೂ ಶಿಕ್ಷಣಕ್ಕೆ ಅಗತ್ಯವಿರುವ ನೂತನ ತಂತಜ್ಞಾನ ಹಾಗೂ ಸಲಕರಣೆಗಳನ್ನು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.

ಈ ಯೋಜನೆ ಮೂಲಕ ತೆಕ್ಕಟ್ಟೆ ಗ್ರಾಮದ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿರುವ ಶಾಲೆಯೆಂದೇ ಗುರುತಿಸಿಕೊಂಡಿದೆ.  130 ಸುದೀರ್ಘ ಇತಿಹಾಸವಿರುವ ಈ ಜ್ಞಾನದೇಗುಲದಲ್ಲಿ 28 ಶಿಕ್ಷಕರಿದ್ದು, 675ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಶಾಲೆಯಲ್ಲಿ ವಿವಿಧ ಬಗೆಯ ಸಸ್ಯಗಳ ಕೈತೋಟ ರಚನೆ,  ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ, ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಿಟ್ ಮೂಲಕ ಮಕ್ಕಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಪ್ರಯೋಗಾಲಯ ಹಾಗೂ ತಂತ್ರಜ್ಞಾನ ಆಧರಿತ ಸ್ಟ್ರಾರ್ಟ್ ಕ್ಲಾಸ್‌ಗಳ ಮೂಲಕ ಪರಿಣಾಮಕಾರಿಯಾಗಿ ಕಲಿಕಾ ಪಾಠಗಳು ಅರ್ಥವಾಗುವಂತೆ ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತಿದೆ.

ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಲ್ಯಾಬ್ ಹಾಗೂ 5 ಸಾವಿರಕ್ಕೂ ಹೆಚ್ಚು ಪುಸ್ತಕಗಳ ವಾಚನಾಲಯ ಇದ್ದು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧರಿತ ನಾವೀನ್ಯ ಬೋಧನಾ ವ್ಯವಸ್ಥೆ ಮಾಡಲಾಗಿದೆ. ಇವೆಲ್ಲವನ್ನೂ ಬಳಸಿಕೊಂಡು ಶಾಲೆಯು  “ಉತ್ತಮ ಶಾಲೆ ರಾಜ್ಯ ಪ್ರಶಸ್ತಿ”, ಉತ್ತಮ ಎಸ್.ಡಿ.ಎಂ.ಸಿ. ಪ್ರಶಸ್ತಿ , ಉತ್ತಮ ನಲಿಕಲಿ ಪ್ರಶಸ್ತಿ, ಪರಿಸರ ಮಿತ್ರ ಪ್ರಶಸ್ತಿಗಳನ್ನು ಗಳಿಸಿದೆ.

ಪಿಎಂಶ್ರೀ ಯೋಜನೆಯಿಂದ ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿ ಉತ್ತಮ ತಾಂತ್ರಿಕ ಶಿಕ್ಷಣ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವುದರೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿದೆ.

ಶಾಲೆಗೆ 130 ವರ್ಷಗಳ ಇತಿಹಾಸವಿದ್ದು, ಪಿಎಂಶ್ರೀ ಯೋಜನೆಯಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದಾರೆ. ಸಿರಿಧಾನ್ಯ, ವೈದ್ಯಕೀಯ ತಪಾಸಣೆ, ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿಯೊಂದಿಗೆ ಹೊಸ ತಂತ್ರಜ್ಞಾನದ ಅಳವಡಿಸಿರುವುದರಿಂದ ಶಾಲೆಯು ಶೈಕ್ಷಣಿಕವಾಗಿ ಜಿಲ್ಲೆಯಲ್ಲಿ ಉತ್ತಮ ಶಾಲೆ ಎಂದು ಗುರುತಿಸಿಕೊಂಡಿದೆ ಎಂದು ಶಾಲಾಮುಖ್ಯ ಶಿಕ್ಷಕರಾದ ಲಲಿತಾ ಸಖಾರಾಮ್ ಹೇಳುತ್ತಾರೆ.

ಕೇಂದ್ರ ಸರಕಾರದ ಪಿಎಂಶ್ರೀ ಯೋಜನೆ ಗ್ರಾಮೀಣ ಭಾಗದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಿದೆ ಎಂದು ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಘವೇಂದ್ರ ದೇವಾಡಿಗ ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

4 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

16 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

17 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago