ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ ಗ್ರಾಮಗಳʼ ನಿರ್ಮಾಣದ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಂಡಿತ್ತು. ಹಲವು ಕಡೆ ಈ ಯೋಜನೆ ಅನುಷ್ಟಾನಗೊಳ್ಳುತ್ತಿದೆ. ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.…..ಮುಂದೆ ಓದಿ….
ಈ ಯೋಜನೆಯಡಿ ʼಮಾದರಿ ಸೌರ ಗ್ರಾಮʼಗಳನ್ನು ನಿರ್ಮಾಣ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು, ಭಾರತದ ಪ್ರತಿಯೊಂದು ಜಿಲ್ಲೆಯಲ್ಲಿ ತಲಾ ಒಂದೊಂದು ಮಾದರಿ ಸೌರ ವಿದ್ಯುತ್ ಗ್ರಾಮಗಳನ್ನು ನಿರ್ಮಿಸಲು ಉತ್ತೇಜನ ಮತ್ತು ಗ್ರಾಮದ ಸಮುದಾಯಗಳು ತಮ್ಮ ಶಕ್ತಿಯ ಅಗತ್ಯತೆಗಳನ್ನು ಈಡೇರಿಸುವ ಜೊತೆಗೆ ಸ್ವಾವಲಂಬಿಯಾಗುವಂತೆ ಮಾಡುವ ಗುರಿ ಹೊಂದಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಈ ಯೋಜನೆ ಜಾರಿಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ವ್ಯಾಪಾರಿ ದಾಮೋದರ್ ಕಾಮತ್, ತಮ್ಮ ಮನೆಯ ಮೇಲೆ ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದು, ಮನೆಗೆ ಬೇಕಾದ ವಿದ್ಯುತ್ ಉತ್ಪಾದಿಸಿಕೊಳ್ಳಲು ಸಹಕಾರಿಯಾಗಿದೆ. ಬ್ಯಾಂಕ್ ನಿಂದ ಸಾಲ ಮತ್ತು ಸಹಾಯಧನ ಸಿಗುತ್ತಿದೆ ಎನ್ನುತ್ತಾರೆ.
ವೈದ್ಯ ಡಾ. ಅಣ್ಣಪ್ಪ ಕಾಮತ್, ಪಿಎಂ ಸೂರ್ಯಘರ್ ಯೋಜನೆ ಲಾಭದಾಯಕವಾಗಿದೆ. ಮನೆಗೆ ಬೇಕಾದ ವಿದ್ಯುತ್ ಬಳಕೆ ಮಾಡಿಕೊಂಡು ಉಳಿಕೆ ವಿದ್ಯುತ್ ಮೆಸ್ಕಾಂಗೆ ನೀಡುತ್ತಿದ್ದೇವೆ. ಪ್ರಧಾನಮಂತ್ರಿಗಳ ಈ ಯೋಜನೆ ಅನುಕೂಲಕರ ಎಂದು ಹೇಳುತ್ತಾರೆ.
ಉಪನ್ಯಾಸಕ ಡಾ. ಸುಧಾಕರ್, ಪಿಎಂ ಸೂರ್ಯಘರ್ ಯೋಜನೆಯಡಿ 5 ಕಿಲೋ ವ್ಯಾಟ್ ಸೋಲಾರ್ ಪ್ಯಾನಲ್ ಅಳವಡಿಸಿದ್ದು, 78 ಸಾವಿರ ರೂಪಾಯಿ ಸಹಾಯಧನ ಮಂಜೂರಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.
ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಲೋಹಿತ್, ಸೌರಶಕ್ತಿ ಮೂಲಕ ಉತ್ಪಾದನೆಯಾಗುವ ವಿದ್ಯುತ್ ನಿಂದ ದೇಶದಲ್ಲಿ ಸಂಪನ್ಮೂಲಗಳ ಸದ್ಭಳಕೆಗೆ ಸಹಕಾರಿಯಾಗಲಿದೆ. ಅದರಲ್ಲಿ ಪಿಎಂ ಸೂರ್ಯಘರ್ ಯೋಜನೆಯು ಒಂದು ಕುಟುಂಬಕ್ಕೆ ಬೇಕಾಗುವ ವಿದ್ಯುತ್ ಅನ್ನು ತಮ್ಮ ಮನೆಯ ಛಾವಣಿ ಮೇಲೆ ಸೌರಶಕ್ತಿ ಮೂಲಕ ಉತ್ಪಾದಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…