MIRROR FOCUS

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ ಗ್ರಾಮಗಳʼ ನಿರ್ಮಾಣದ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಂಡಿತ್ತು. ಹಲವು ಕಡೆ ಈ ಯೋಜನೆ ಅನುಷ್ಟಾನಗೊಳ್ಳುತ್ತಿದೆ. ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.…..ಮುಂದೆ ಓದಿ….

Advertisement
Advertisement

ಈ ಯೋಜನೆಯಡಿ ʼಮಾದರಿ ಸೌರ ಗ್ರಾಮʼಗಳನ್ನು ನಿರ್ಮಾಣ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು, ಭಾರತದ ಪ್ರತಿಯೊಂದು ಜಿಲ್ಲೆಯಲ್ಲಿ ತಲಾ ಒಂದೊಂದು ಮಾದರಿ ಸೌರ ವಿದ್ಯುತ್‌ ಗ್ರಾಮಗಳನ್ನು ನಿರ್ಮಿಸಲು ಉತ್ತೇಜನ ಮತ್ತು ಗ್ರಾಮದ ಸಮುದಾಯಗಳು ತಮ್ಮ ಶಕ್ತಿಯ ಅಗತ್ಯತೆಗಳನ್ನು ಈಡೇರಿಸುವ ಜೊತೆಗೆ ಸ್ವಾವಲಂಬಿಯಾಗುವಂತೆ ಮಾಡುವ ಗುರಿ ಹೊಂದಲಾಗಿದೆ. ‌

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಈ ಯೋಜನೆ ಜಾರಿಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ವ್ಯಾಪಾರಿ  ದಾಮೋದರ್ ಕಾಮತ್, ತಮ್ಮ ಮನೆಯ ಮೇಲೆ ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದು, ಮನೆಗೆ ಬೇಕಾದ ವಿದ್ಯುತ್ ಉತ್ಪಾದಿಸಿಕೊಳ್ಳಲು ಸಹಕಾರಿಯಾಗಿದೆ. ಬ್ಯಾಂಕ್ ನಿಂದ ಸಾಲ ಮತ್ತು ಸಹಾಯಧನ ಸಿಗುತ್ತಿದೆ ಎನ್ನುತ್ತಾರೆ.

ವೈದ್ಯ ಡಾ. ಅಣ್ಣಪ್ಪ ಕಾಮತ್, ಪಿಎಂ ಸೂರ್ಯಘರ್ ಯೋಜನೆ ಲಾಭದಾಯಕವಾಗಿದೆ. ಮನೆಗೆ ಬೇಕಾದ ವಿದ್ಯುತ್ ಬಳಕೆ ಮಾಡಿಕೊಂಡು ಉಳಿಕೆ ವಿದ್ಯುತ್ ಮೆಸ್ಕಾಂಗೆ ನೀಡುತ್ತಿದ್ದೇವೆ. ಪ್ರಧಾನಮಂತ್ರಿಗಳ ಈ ಯೋಜನೆ ಅನುಕೂಲಕರ ಎಂದು ಹೇಳುತ್ತಾರೆ.

Advertisement

ಉಪನ್ಯಾಸಕ ಡಾ. ಸುಧಾಕರ್, ಪಿಎಂ ಸೂರ್ಯಘರ್ ಯೋಜನೆಯಡಿ 5 ಕಿಲೋ ವ್ಯಾಟ್ ಸೋಲಾರ್ ಪ್ಯಾನಲ್ ಅಳವಡಿಸಿದ್ದು, 78 ಸಾವಿರ ರೂಪಾಯಿ ಸಹಾಯಧನ ಮಂಜೂರಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.

ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಲೋಹಿತ್, ಸೌರಶಕ್ತಿ ಮೂಲಕ ಉತ್ಪಾದನೆಯಾಗುವ ವಿದ್ಯುತ್ ನಿಂದ ದೇಶದಲ್ಲಿ ಸಂಪನ್ಮೂಲಗಳ ಸದ್ಭಳಕೆಗೆ ಸಹಕಾರಿಯಾಗಲಿದೆ. ಅದರಲ್ಲಿ ಪಿಎಂ ಸೂರ್ಯಘರ್ ಯೋಜನೆಯು ಒಂದು ಕುಟುಂಬಕ್ಕೆ ಬೇಕಾಗುವ ವಿದ್ಯುತ್ ಅನ್ನು ತಮ್ಮ ಮನೆಯ ಛಾವಣಿ ಮೇಲೆ ಸೌರಶಕ್ತಿ ಮೂಲಕ ಉತ್ಪಾದಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ

ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…

5 hours ago

ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ

ಲಡಾಖ್‌ನ ದ್ರಾಸುದಲ್ಲಿಂದು  26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ   ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…

5 hours ago

ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ

ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…

6 hours ago

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…

9 hours ago

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…

12 hours ago

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…

13 hours ago