Advertisement
MIRROR FOCUS

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

Share

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ ಗ್ರಾಮಗಳʼ ನಿರ್ಮಾಣದ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಂಡಿತ್ತು. ಹಲವು ಕಡೆ ಈ ಯೋಜನೆ ಅನುಷ್ಟಾನಗೊಳ್ಳುತ್ತಿದೆ. ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.…..ಮುಂದೆ ಓದಿ….

Advertisement
Advertisement

ಈ ಯೋಜನೆಯಡಿ ʼಮಾದರಿ ಸೌರ ಗ್ರಾಮʼಗಳನ್ನು ನಿರ್ಮಾಣ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು, ಭಾರತದ ಪ್ರತಿಯೊಂದು ಜಿಲ್ಲೆಯಲ್ಲಿ ತಲಾ ಒಂದೊಂದು ಮಾದರಿ ಸೌರ ವಿದ್ಯುತ್‌ ಗ್ರಾಮಗಳನ್ನು ನಿರ್ಮಿಸಲು ಉತ್ತೇಜನ ಮತ್ತು ಗ್ರಾಮದ ಸಮುದಾಯಗಳು ತಮ್ಮ ಶಕ್ತಿಯ ಅಗತ್ಯತೆಗಳನ್ನು ಈಡೇರಿಸುವ ಜೊತೆಗೆ ಸ್ವಾವಲಂಬಿಯಾಗುವಂತೆ ಮಾಡುವ ಗುರಿ ಹೊಂದಲಾಗಿದೆ. ‌

Advertisement

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಈ ಯೋಜನೆ ಜಾರಿಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ವ್ಯಾಪಾರಿ  ದಾಮೋದರ್ ಕಾಮತ್, ತಮ್ಮ ಮನೆಯ ಮೇಲೆ ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದು, ಮನೆಗೆ ಬೇಕಾದ ವಿದ್ಯುತ್ ಉತ್ಪಾದಿಸಿಕೊಳ್ಳಲು ಸಹಕಾರಿಯಾಗಿದೆ. ಬ್ಯಾಂಕ್ ನಿಂದ ಸಾಲ ಮತ್ತು ಸಹಾಯಧನ ಸಿಗುತ್ತಿದೆ ಎನ್ನುತ್ತಾರೆ.

Advertisement

ವೈದ್ಯ ಡಾ. ಅಣ್ಣಪ್ಪ ಕಾಮತ್, ಪಿಎಂ ಸೂರ್ಯಘರ್ ಯೋಜನೆ ಲಾಭದಾಯಕವಾಗಿದೆ. ಮನೆಗೆ ಬೇಕಾದ ವಿದ್ಯುತ್ ಬಳಕೆ ಮಾಡಿಕೊಂಡು ಉಳಿಕೆ ವಿದ್ಯುತ್ ಮೆಸ್ಕಾಂಗೆ ನೀಡುತ್ತಿದ್ದೇವೆ. ಪ್ರಧಾನಮಂತ್ರಿಗಳ ಈ ಯೋಜನೆ ಅನುಕೂಲಕರ ಎಂದು ಹೇಳುತ್ತಾರೆ.

ಉಪನ್ಯಾಸಕ ಡಾ. ಸುಧಾಕರ್, ಪಿಎಂ ಸೂರ್ಯಘರ್ ಯೋಜನೆಯಡಿ 5 ಕಿಲೋ ವ್ಯಾಟ್ ಸೋಲಾರ್ ಪ್ಯಾನಲ್ ಅಳವಡಿಸಿದ್ದು, 78 ಸಾವಿರ ರೂಪಾಯಿ ಸಹಾಯಧನ ಮಂಜೂರಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.

Advertisement

ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಲೋಹಿತ್, ಸೌರಶಕ್ತಿ ಮೂಲಕ ಉತ್ಪಾದನೆಯಾಗುವ ವಿದ್ಯುತ್ ನಿಂದ ದೇಶದಲ್ಲಿ ಸಂಪನ್ಮೂಲಗಳ ಸದ್ಭಳಕೆಗೆ ಸಹಕಾರಿಯಾಗಲಿದೆ. ಅದರಲ್ಲಿ ಪಿಎಂ ಸೂರ್ಯಘರ್ ಯೋಜನೆಯು ಒಂದು ಕುಟುಂಬಕ್ಕೆ ಬೇಕಾಗುವ ವಿದ್ಯುತ್ ಅನ್ನು ತಮ್ಮ ಮನೆಯ ಛಾವಣಿ ಮೇಲೆ ಸೌರಶಕ್ತಿ ಮೂಲಕ ಉತ್ಪಾದಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…

2 mins ago

ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…

30 mins ago

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ …

1 hour ago

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ  ಧನ ಸಹಾಯ ನೀಡುವುದು ಮತ್ತು ರೈತರ…

1 hour ago

ಗ್ರಾಮೀಣ ಪರಿಸರದಲ್ಲಿ ಕೃಷಿ ಜ್ಞಾನಾನುಭವದ ಜೀವಂತ ಸಾಕ್ಷಿ ಬದನಾಜೆ ಶಂಕರ ಭಟ್

ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…

2 hours ago

ಹವಾಮಾನ ವರದಿ | 18-09-2024 | ದೂರವಾದ ಮಳೆ | ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ |

ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.

10 hours ago