MIRROR FOCUS

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ ಗ್ರಾಮಗಳʼ ನಿರ್ಮಾಣದ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಂಡಿತ್ತು. ಹಲವು ಕಡೆ ಈ ಯೋಜನೆ ಅನುಷ್ಟಾನಗೊಳ್ಳುತ್ತಿದೆ. ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.…..ಮುಂದೆ ಓದಿ….

Advertisement
Advertisement

ಈ ಯೋಜನೆಯಡಿ ʼಮಾದರಿ ಸೌರ ಗ್ರಾಮʼಗಳನ್ನು ನಿರ್ಮಾಣ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು, ಭಾರತದ ಪ್ರತಿಯೊಂದು ಜಿಲ್ಲೆಯಲ್ಲಿ ತಲಾ ಒಂದೊಂದು ಮಾದರಿ ಸೌರ ವಿದ್ಯುತ್‌ ಗ್ರಾಮಗಳನ್ನು ನಿರ್ಮಿಸಲು ಉತ್ತೇಜನ ಮತ್ತು ಗ್ರಾಮದ ಸಮುದಾಯಗಳು ತಮ್ಮ ಶಕ್ತಿಯ ಅಗತ್ಯತೆಗಳನ್ನು ಈಡೇರಿಸುವ ಜೊತೆಗೆ ಸ್ವಾವಲಂಬಿಯಾಗುವಂತೆ ಮಾಡುವ ಗುರಿ ಹೊಂದಲಾಗಿದೆ. ‌

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಈ ಯೋಜನೆ ಜಾರಿಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ವ್ಯಾಪಾರಿ  ದಾಮೋದರ್ ಕಾಮತ್, ತಮ್ಮ ಮನೆಯ ಮೇಲೆ ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದು, ಮನೆಗೆ ಬೇಕಾದ ವಿದ್ಯುತ್ ಉತ್ಪಾದಿಸಿಕೊಳ್ಳಲು ಸಹಕಾರಿಯಾಗಿದೆ. ಬ್ಯಾಂಕ್ ನಿಂದ ಸಾಲ ಮತ್ತು ಸಹಾಯಧನ ಸಿಗುತ್ತಿದೆ ಎನ್ನುತ್ತಾರೆ.

ವೈದ್ಯ ಡಾ. ಅಣ್ಣಪ್ಪ ಕಾಮತ್, ಪಿಎಂ ಸೂರ್ಯಘರ್ ಯೋಜನೆ ಲಾಭದಾಯಕವಾಗಿದೆ. ಮನೆಗೆ ಬೇಕಾದ ವಿದ್ಯುತ್ ಬಳಕೆ ಮಾಡಿಕೊಂಡು ಉಳಿಕೆ ವಿದ್ಯುತ್ ಮೆಸ್ಕಾಂಗೆ ನೀಡುತ್ತಿದ್ದೇವೆ. ಪ್ರಧಾನಮಂತ್ರಿಗಳ ಈ ಯೋಜನೆ ಅನುಕೂಲಕರ ಎಂದು ಹೇಳುತ್ತಾರೆ.

Advertisement

ಉಪನ್ಯಾಸಕ ಡಾ. ಸುಧಾಕರ್, ಪಿಎಂ ಸೂರ್ಯಘರ್ ಯೋಜನೆಯಡಿ 5 ಕಿಲೋ ವ್ಯಾಟ್ ಸೋಲಾರ್ ಪ್ಯಾನಲ್ ಅಳವಡಿಸಿದ್ದು, 78 ಸಾವಿರ ರೂಪಾಯಿ ಸಹಾಯಧನ ಮಂಜೂರಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.

ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಲೋಹಿತ್, ಸೌರಶಕ್ತಿ ಮೂಲಕ ಉತ್ಪಾದನೆಯಾಗುವ ವಿದ್ಯುತ್ ನಿಂದ ದೇಶದಲ್ಲಿ ಸಂಪನ್ಮೂಲಗಳ ಸದ್ಭಳಕೆಗೆ ಸಹಕಾರಿಯಾಗಲಿದೆ. ಅದರಲ್ಲಿ ಪಿಎಂ ಸೂರ್ಯಘರ್ ಯೋಜನೆಯು ಒಂದು ಕುಟುಂಬಕ್ಕೆ ಬೇಕಾಗುವ ವಿದ್ಯುತ್ ಅನ್ನು ತಮ್ಮ ಮನೆಯ ಛಾವಣಿ ಮೇಲೆ ಸೌರಶಕ್ತಿ ಮೂಲಕ ಉತ್ಪಾದಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

6 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

8 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

13 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

14 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

18 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

20 hours ago