Advertisement
MIRROR FOCUS

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

Share

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ ಗ್ರಾಮಗಳʼ ನಿರ್ಮಾಣದ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಂಡಿತ್ತು. ಹಲವು ಕಡೆ ಈ ಯೋಜನೆ ಅನುಷ್ಟಾನಗೊಳ್ಳುತ್ತಿದೆ. ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.…..ಮುಂದೆ ಓದಿ….

ಈ ಯೋಜನೆಯಡಿ ʼಮಾದರಿ ಸೌರ ಗ್ರಾಮʼಗಳನ್ನು ನಿರ್ಮಾಣ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು, ಭಾರತದ ಪ್ರತಿಯೊಂದು ಜಿಲ್ಲೆಯಲ್ಲಿ ತಲಾ ಒಂದೊಂದು ಮಾದರಿ ಸೌರ ವಿದ್ಯುತ್‌ ಗ್ರಾಮಗಳನ್ನು ನಿರ್ಮಿಸಲು ಉತ್ತೇಜನ ಮತ್ತು ಗ್ರಾಮದ ಸಮುದಾಯಗಳು ತಮ್ಮ ಶಕ್ತಿಯ ಅಗತ್ಯತೆಗಳನ್ನು ಈಡೇರಿಸುವ ಜೊತೆಗೆ ಸ್ವಾವಲಂಬಿಯಾಗುವಂತೆ ಮಾಡುವ ಗುರಿ ಹೊಂದಲಾಗಿದೆ. ‌

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಈ ಯೋಜನೆ ಜಾರಿಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ವ್ಯಾಪಾರಿ  ದಾಮೋದರ್ ಕಾಮತ್, ತಮ್ಮ ಮನೆಯ ಮೇಲೆ ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದು, ಮನೆಗೆ ಬೇಕಾದ ವಿದ್ಯುತ್ ಉತ್ಪಾದಿಸಿಕೊಳ್ಳಲು ಸಹಕಾರಿಯಾಗಿದೆ. ಬ್ಯಾಂಕ್ ನಿಂದ ಸಾಲ ಮತ್ತು ಸಹಾಯಧನ ಸಿಗುತ್ತಿದೆ ಎನ್ನುತ್ತಾರೆ.

ವೈದ್ಯ ಡಾ. ಅಣ್ಣಪ್ಪ ಕಾಮತ್, ಪಿಎಂ ಸೂರ್ಯಘರ್ ಯೋಜನೆ ಲಾಭದಾಯಕವಾಗಿದೆ. ಮನೆಗೆ ಬೇಕಾದ ವಿದ್ಯುತ್ ಬಳಕೆ ಮಾಡಿಕೊಂಡು ಉಳಿಕೆ ವಿದ್ಯುತ್ ಮೆಸ್ಕಾಂಗೆ ನೀಡುತ್ತಿದ್ದೇವೆ. ಪ್ರಧಾನಮಂತ್ರಿಗಳ ಈ ಯೋಜನೆ ಅನುಕೂಲಕರ ಎಂದು ಹೇಳುತ್ತಾರೆ.

ಉಪನ್ಯಾಸಕ ಡಾ. ಸುಧಾಕರ್, ಪಿಎಂ ಸೂರ್ಯಘರ್ ಯೋಜನೆಯಡಿ 5 ಕಿಲೋ ವ್ಯಾಟ್ ಸೋಲಾರ್ ಪ್ಯಾನಲ್ ಅಳವಡಿಸಿದ್ದು, 78 ಸಾವಿರ ರೂಪಾಯಿ ಸಹಾಯಧನ ಮಂಜೂರಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.

ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಲೋಹಿತ್, ಸೌರಶಕ್ತಿ ಮೂಲಕ ಉತ್ಪಾದನೆಯಾಗುವ ವಿದ್ಯುತ್ ನಿಂದ ದೇಶದಲ್ಲಿ ಸಂಪನ್ಮೂಲಗಳ ಸದ್ಭಳಕೆಗೆ ಸಹಕಾರಿಯಾಗಲಿದೆ. ಅದರಲ್ಲಿ ಪಿಎಂ ಸೂರ್ಯಘರ್ ಯೋಜನೆಯು ಒಂದು ಕುಟುಂಬಕ್ಕೆ ಬೇಕಾಗುವ ವಿದ್ಯುತ್ ಅನ್ನು ತಮ್ಮ ಮನೆಯ ಛಾವಣಿ ಮೇಲೆ ಸೌರಶಕ್ತಿ ಮೂಲಕ ಉತ್ಪಾದಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

11 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

17 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

18 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

18 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

18 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

18 hours ago