ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ ಗ್ರಾಮಗಳʼ ನಿರ್ಮಾಣದ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಂಡಿತ್ತು. ಹಲವು ಕಡೆ ಈ ಯೋಜನೆ ಅನುಷ್ಟಾನಗೊಳ್ಳುತ್ತಿದೆ. ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.…..ಮುಂದೆ ಓದಿ….
ಈ ಯೋಜನೆಯಡಿ ʼಮಾದರಿ ಸೌರ ಗ್ರಾಮʼಗಳನ್ನು ನಿರ್ಮಾಣ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು, ಭಾರತದ ಪ್ರತಿಯೊಂದು ಜಿಲ್ಲೆಯಲ್ಲಿ ತಲಾ ಒಂದೊಂದು ಮಾದರಿ ಸೌರ ವಿದ್ಯುತ್ ಗ್ರಾಮಗಳನ್ನು ನಿರ್ಮಿಸಲು ಉತ್ತೇಜನ ಮತ್ತು ಗ್ರಾಮದ ಸಮುದಾಯಗಳು ತಮ್ಮ ಶಕ್ತಿಯ ಅಗತ್ಯತೆಗಳನ್ನು ಈಡೇರಿಸುವ ಜೊತೆಗೆ ಸ್ವಾವಲಂಬಿಯಾಗುವಂತೆ ಮಾಡುವ ಗುರಿ ಹೊಂದಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಈ ಯೋಜನೆ ಜಾರಿಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ವ್ಯಾಪಾರಿ ದಾಮೋದರ್ ಕಾಮತ್, ತಮ್ಮ ಮನೆಯ ಮೇಲೆ ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದು, ಮನೆಗೆ ಬೇಕಾದ ವಿದ್ಯುತ್ ಉತ್ಪಾದಿಸಿಕೊಳ್ಳಲು ಸಹಕಾರಿಯಾಗಿದೆ. ಬ್ಯಾಂಕ್ ನಿಂದ ಸಾಲ ಮತ್ತು ಸಹಾಯಧನ ಸಿಗುತ್ತಿದೆ ಎನ್ನುತ್ತಾರೆ.
ವೈದ್ಯ ಡಾ. ಅಣ್ಣಪ್ಪ ಕಾಮತ್, ಪಿಎಂ ಸೂರ್ಯಘರ್ ಯೋಜನೆ ಲಾಭದಾಯಕವಾಗಿದೆ. ಮನೆಗೆ ಬೇಕಾದ ವಿದ್ಯುತ್ ಬಳಕೆ ಮಾಡಿಕೊಂಡು ಉಳಿಕೆ ವಿದ್ಯುತ್ ಮೆಸ್ಕಾಂಗೆ ನೀಡುತ್ತಿದ್ದೇವೆ. ಪ್ರಧಾನಮಂತ್ರಿಗಳ ಈ ಯೋಜನೆ ಅನುಕೂಲಕರ ಎಂದು ಹೇಳುತ್ತಾರೆ.
ಉಪನ್ಯಾಸಕ ಡಾ. ಸುಧಾಕರ್, ಪಿಎಂ ಸೂರ್ಯಘರ್ ಯೋಜನೆಯಡಿ 5 ಕಿಲೋ ವ್ಯಾಟ್ ಸೋಲಾರ್ ಪ್ಯಾನಲ್ ಅಳವಡಿಸಿದ್ದು, 78 ಸಾವಿರ ರೂಪಾಯಿ ಸಹಾಯಧನ ಮಂಜೂರಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.
ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಲೋಹಿತ್, ಸೌರಶಕ್ತಿ ಮೂಲಕ ಉತ್ಪಾದನೆಯಾಗುವ ವಿದ್ಯುತ್ ನಿಂದ ದೇಶದಲ್ಲಿ ಸಂಪನ್ಮೂಲಗಳ ಸದ್ಭಳಕೆಗೆ ಸಹಕಾರಿಯಾಗಲಿದೆ. ಅದರಲ್ಲಿ ಪಿಎಂ ಸೂರ್ಯಘರ್ ಯೋಜನೆಯು ಒಂದು ಕುಟುಂಬಕ್ಕೆ ಬೇಕಾಗುವ ವಿದ್ಯುತ್ ಅನ್ನು ತಮ್ಮ ಮನೆಯ ಛಾವಣಿ ಮೇಲೆ ಸೌರಶಕ್ತಿ ಮೂಲಕ ಉತ್ಪಾದಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…