Advertisement
MIRROR FOCUS

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

Share

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ ಗ್ರಾಮಗಳʼ ನಿರ್ಮಾಣದ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಂಡಿತ್ತು. ಹಲವು ಕಡೆ ಈ ಯೋಜನೆ ಅನುಷ್ಟಾನಗೊಳ್ಳುತ್ತಿದೆ. ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.…..ಮುಂದೆ ಓದಿ….

ಈ ಯೋಜನೆಯಡಿ ʼಮಾದರಿ ಸೌರ ಗ್ರಾಮʼಗಳನ್ನು ನಿರ್ಮಾಣ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು, ಭಾರತದ ಪ್ರತಿಯೊಂದು ಜಿಲ್ಲೆಯಲ್ಲಿ ತಲಾ ಒಂದೊಂದು ಮಾದರಿ ಸೌರ ವಿದ್ಯುತ್‌ ಗ್ರಾಮಗಳನ್ನು ನಿರ್ಮಿಸಲು ಉತ್ತೇಜನ ಮತ್ತು ಗ್ರಾಮದ ಸಮುದಾಯಗಳು ತಮ್ಮ ಶಕ್ತಿಯ ಅಗತ್ಯತೆಗಳನ್ನು ಈಡೇರಿಸುವ ಜೊತೆಗೆ ಸ್ವಾವಲಂಬಿಯಾಗುವಂತೆ ಮಾಡುವ ಗುರಿ ಹೊಂದಲಾಗಿದೆ. ‌

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಈ ಯೋಜನೆ ಜಾರಿಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ವ್ಯಾಪಾರಿ  ದಾಮೋದರ್ ಕಾಮತ್, ತಮ್ಮ ಮನೆಯ ಮೇಲೆ ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದು, ಮನೆಗೆ ಬೇಕಾದ ವಿದ್ಯುತ್ ಉತ್ಪಾದಿಸಿಕೊಳ್ಳಲು ಸಹಕಾರಿಯಾಗಿದೆ. ಬ್ಯಾಂಕ್ ನಿಂದ ಸಾಲ ಮತ್ತು ಸಹಾಯಧನ ಸಿಗುತ್ತಿದೆ ಎನ್ನುತ್ತಾರೆ.

ವೈದ್ಯ ಡಾ. ಅಣ್ಣಪ್ಪ ಕಾಮತ್, ಪಿಎಂ ಸೂರ್ಯಘರ್ ಯೋಜನೆ ಲಾಭದಾಯಕವಾಗಿದೆ. ಮನೆಗೆ ಬೇಕಾದ ವಿದ್ಯುತ್ ಬಳಕೆ ಮಾಡಿಕೊಂಡು ಉಳಿಕೆ ವಿದ್ಯುತ್ ಮೆಸ್ಕಾಂಗೆ ನೀಡುತ್ತಿದ್ದೇವೆ. ಪ್ರಧಾನಮಂತ್ರಿಗಳ ಈ ಯೋಜನೆ ಅನುಕೂಲಕರ ಎಂದು ಹೇಳುತ್ತಾರೆ.

ಉಪನ್ಯಾಸಕ ಡಾ. ಸುಧಾಕರ್, ಪಿಎಂ ಸೂರ್ಯಘರ್ ಯೋಜನೆಯಡಿ 5 ಕಿಲೋ ವ್ಯಾಟ್ ಸೋಲಾರ್ ಪ್ಯಾನಲ್ ಅಳವಡಿಸಿದ್ದು, 78 ಸಾವಿರ ರೂಪಾಯಿ ಸಹಾಯಧನ ಮಂಜೂರಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.

ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಲೋಹಿತ್, ಸೌರಶಕ್ತಿ ಮೂಲಕ ಉತ್ಪಾದನೆಯಾಗುವ ವಿದ್ಯುತ್ ನಿಂದ ದೇಶದಲ್ಲಿ ಸಂಪನ್ಮೂಲಗಳ ಸದ್ಭಳಕೆಗೆ ಸಹಕಾರಿಯಾಗಲಿದೆ. ಅದರಲ್ಲಿ ಪಿಎಂ ಸೂರ್ಯಘರ್ ಯೋಜನೆಯು ಒಂದು ಕುಟುಂಬಕ್ಕೆ ಬೇಕಾಗುವ ವಿದ್ಯುತ್ ಅನ್ನು ತಮ್ಮ ಮನೆಯ ಛಾವಣಿ ಮೇಲೆ ಸೌರಶಕ್ತಿ ಮೂಲಕ ಉತ್ಪಾದಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

7 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

7 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

7 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

7 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

18 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

18 hours ago