ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ ಗ್ರಾಮಗಳʼ ನಿರ್ಮಾಣದ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಂಡಿತ್ತು. ಹಲವು ಕಡೆ ಈ ಯೋಜನೆ ಅನುಷ್ಟಾನಗೊಳ್ಳುತ್ತಿದೆ. ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.…..ಮುಂದೆ ಓದಿ….
ಈ ಯೋಜನೆಯಡಿ ʼಮಾದರಿ ಸೌರ ಗ್ರಾಮʼಗಳನ್ನು ನಿರ್ಮಾಣ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು, ಭಾರತದ ಪ್ರತಿಯೊಂದು ಜಿಲ್ಲೆಯಲ್ಲಿ ತಲಾ ಒಂದೊಂದು ಮಾದರಿ ಸೌರ ವಿದ್ಯುತ್ ಗ್ರಾಮಗಳನ್ನು ನಿರ್ಮಿಸಲು ಉತ್ತೇಜನ ಮತ್ತು ಗ್ರಾಮದ ಸಮುದಾಯಗಳು ತಮ್ಮ ಶಕ್ತಿಯ ಅಗತ್ಯತೆಗಳನ್ನು ಈಡೇರಿಸುವ ಜೊತೆಗೆ ಸ್ವಾವಲಂಬಿಯಾಗುವಂತೆ ಮಾಡುವ ಗುರಿ ಹೊಂದಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಈ ಯೋಜನೆ ಜಾರಿಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ವ್ಯಾಪಾರಿ ದಾಮೋದರ್ ಕಾಮತ್, ತಮ್ಮ ಮನೆಯ ಮೇಲೆ ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದು, ಮನೆಗೆ ಬೇಕಾದ ವಿದ್ಯುತ್ ಉತ್ಪಾದಿಸಿಕೊಳ್ಳಲು ಸಹಕಾರಿಯಾಗಿದೆ. ಬ್ಯಾಂಕ್ ನಿಂದ ಸಾಲ ಮತ್ತು ಸಹಾಯಧನ ಸಿಗುತ್ತಿದೆ ಎನ್ನುತ್ತಾರೆ.
ವೈದ್ಯ ಡಾ. ಅಣ್ಣಪ್ಪ ಕಾಮತ್, ಪಿಎಂ ಸೂರ್ಯಘರ್ ಯೋಜನೆ ಲಾಭದಾಯಕವಾಗಿದೆ. ಮನೆಗೆ ಬೇಕಾದ ವಿದ್ಯುತ್ ಬಳಕೆ ಮಾಡಿಕೊಂಡು ಉಳಿಕೆ ವಿದ್ಯುತ್ ಮೆಸ್ಕಾಂಗೆ ನೀಡುತ್ತಿದ್ದೇವೆ. ಪ್ರಧಾನಮಂತ್ರಿಗಳ ಈ ಯೋಜನೆ ಅನುಕೂಲಕರ ಎಂದು ಹೇಳುತ್ತಾರೆ.
ಉಪನ್ಯಾಸಕ ಡಾ. ಸುಧಾಕರ್, ಪಿಎಂ ಸೂರ್ಯಘರ್ ಯೋಜನೆಯಡಿ 5 ಕಿಲೋ ವ್ಯಾಟ್ ಸೋಲಾರ್ ಪ್ಯಾನಲ್ ಅಳವಡಿಸಿದ್ದು, 78 ಸಾವಿರ ರೂಪಾಯಿ ಸಹಾಯಧನ ಮಂಜೂರಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.
ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಲೋಹಿತ್, ಸೌರಶಕ್ತಿ ಮೂಲಕ ಉತ್ಪಾದನೆಯಾಗುವ ವಿದ್ಯುತ್ ನಿಂದ ದೇಶದಲ್ಲಿ ಸಂಪನ್ಮೂಲಗಳ ಸದ್ಭಳಕೆಗೆ ಸಹಕಾರಿಯಾಗಲಿದೆ. ಅದರಲ್ಲಿ ಪಿಎಂ ಸೂರ್ಯಘರ್ ಯೋಜನೆಯು ಒಂದು ಕುಟುಂಬಕ್ಕೆ ಬೇಕಾಗುವ ವಿದ್ಯುತ್ ಅನ್ನು ತಮ್ಮ ಮನೆಯ ಛಾವಣಿ ಮೇಲೆ ಸೌರಶಕ್ತಿ ಮೂಲಕ ಉತ್ಪಾದಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…