ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ ಗ್ರಾಮಗಳʼ ನಿರ್ಮಾಣದ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಂಡಿತ್ತು. ಹಲವು ಕಡೆ ಈ ಯೋಜನೆ ಅನುಷ್ಟಾನಗೊಳ್ಳುತ್ತಿದೆ. ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.…..ಮುಂದೆ ಓದಿ….
ಈ ಯೋಜನೆಯಡಿ ʼಮಾದರಿ ಸೌರ ಗ್ರಾಮʼಗಳನ್ನು ನಿರ್ಮಾಣ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು, ಭಾರತದ ಪ್ರತಿಯೊಂದು ಜಿಲ್ಲೆಯಲ್ಲಿ ತಲಾ ಒಂದೊಂದು ಮಾದರಿ ಸೌರ ವಿದ್ಯುತ್ ಗ್ರಾಮಗಳನ್ನು ನಿರ್ಮಿಸಲು ಉತ್ತೇಜನ ಮತ್ತು ಗ್ರಾಮದ ಸಮುದಾಯಗಳು ತಮ್ಮ ಶಕ್ತಿಯ ಅಗತ್ಯತೆಗಳನ್ನು ಈಡೇರಿಸುವ ಜೊತೆಗೆ ಸ್ವಾವಲಂಬಿಯಾಗುವಂತೆ ಮಾಡುವ ಗುರಿ ಹೊಂದಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಈ ಯೋಜನೆ ಜಾರಿಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ವ್ಯಾಪಾರಿ ದಾಮೋದರ್ ಕಾಮತ್, ತಮ್ಮ ಮನೆಯ ಮೇಲೆ ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದು, ಮನೆಗೆ ಬೇಕಾದ ವಿದ್ಯುತ್ ಉತ್ಪಾದಿಸಿಕೊಳ್ಳಲು ಸಹಕಾರಿಯಾಗಿದೆ. ಬ್ಯಾಂಕ್ ನಿಂದ ಸಾಲ ಮತ್ತು ಸಹಾಯಧನ ಸಿಗುತ್ತಿದೆ ಎನ್ನುತ್ತಾರೆ.
ವೈದ್ಯ ಡಾ. ಅಣ್ಣಪ್ಪ ಕಾಮತ್, ಪಿಎಂ ಸೂರ್ಯಘರ್ ಯೋಜನೆ ಲಾಭದಾಯಕವಾಗಿದೆ. ಮನೆಗೆ ಬೇಕಾದ ವಿದ್ಯುತ್ ಬಳಕೆ ಮಾಡಿಕೊಂಡು ಉಳಿಕೆ ವಿದ್ಯುತ್ ಮೆಸ್ಕಾಂಗೆ ನೀಡುತ್ತಿದ್ದೇವೆ. ಪ್ರಧಾನಮಂತ್ರಿಗಳ ಈ ಯೋಜನೆ ಅನುಕೂಲಕರ ಎಂದು ಹೇಳುತ್ತಾರೆ.
ಉಪನ್ಯಾಸಕ ಡಾ. ಸುಧಾಕರ್, ಪಿಎಂ ಸೂರ್ಯಘರ್ ಯೋಜನೆಯಡಿ 5 ಕಿಲೋ ವ್ಯಾಟ್ ಸೋಲಾರ್ ಪ್ಯಾನಲ್ ಅಳವಡಿಸಿದ್ದು, 78 ಸಾವಿರ ರೂಪಾಯಿ ಸಹಾಯಧನ ಮಂಜೂರಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.
ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಲೋಹಿತ್, ಸೌರಶಕ್ತಿ ಮೂಲಕ ಉತ್ಪಾದನೆಯಾಗುವ ವಿದ್ಯುತ್ ನಿಂದ ದೇಶದಲ್ಲಿ ಸಂಪನ್ಮೂಲಗಳ ಸದ್ಭಳಕೆಗೆ ಸಹಕಾರಿಯಾಗಲಿದೆ. ಅದರಲ್ಲಿ ಪಿಎಂ ಸೂರ್ಯಘರ್ ಯೋಜನೆಯು ಒಂದು ಕುಟುಂಬಕ್ಕೆ ಬೇಕಾಗುವ ವಿದ್ಯುತ್ ಅನ್ನು ತಮ್ಮ ಮನೆಯ ಛಾವಣಿ ಮೇಲೆ ಸೌರಶಕ್ತಿ ಮೂಲಕ ಉತ್ಪಾದಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…