Advertisement
ಸುದ್ದಿಗಳು

ಅ.17 ದೆಹಲಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022 | ‘ಭಾರತ್‌’ ಬ್ರ್ಯಾಂಡ್‌ ಯೂರಿಯಾ ಬಿಡುಗಡೆ | ಏನಿದು “ಭಾರತ್”‌ ಯೂರಿಯಾ ? |

Share

ಕೃಷಿ ಹಾಗೂ ರಸಗೊಬ್ಬರ ಸಚಿವಾಲಯ ಹಾಗೂ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ವತಿಯಿಂದ  ಪಿಎಂ ಕಿಸಾನ್‌ ಸಮ್ಮಾನ್‌ ಸಮ್ಮೇಳನವು ದೆಹಲಿಯಲ್ಲಿ ಅ.17 ರಿಂದ 2 ದಿನಗಳ ಕಾಲ ನಡೆಯಲಿದೆ. ಈ ಸಂದರ್ಭ ಭಾರತ್‌’ ಬ್ರ್ಯಾಂಡ್‌ನಡಿ ಯೂರಿಯೂ ಬಿಡುಗಡೆಯಾಗಲಿದೆ. ಇದೇ ವೇಳೆ ಕೇಂದ್ರ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

ರೈತರಿಗೆ ಸಹಾಯಧನದ ಮೂಲಕ ವಿತರಣೆಯಾಗುವ ಗೊಬ್ಬರಗಳು ಒಂದು ರಾಷ್ಟ್ರ ಒಂದು ರಸಗೊಬ್ಬರ ಯೋಜನೆ ಅಡಿಯಲ್ಲಿ ಭಾರತ್‌ ಬ್ರಾಂಡ್‌ ಮೂಲಕ ವಿತರಣೆಯಾಗಲಿದೆ. “ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022”  ಕಾರ್ಯಕ್ರಮದಲ್ಲಿ ರೈತರು, ಅಗ್ರಿ ಸ್ಟಾರ್ಟಪ್‌ಗಳು, ಸಂಶೋಧಕರು, ನೀತಿ ನಿರೂಪಕರು, ಬ್ಯಾಂಕರ್‌ಗಳು ಮತ್ತು ಬಂಡವಾಳಗಾರರು ಈ ಕಾರ್ಯಕ್ರಮದಲ್ಲಿ ಇರುತ್ತಾರೆ. ಈ ಕಾರ್ಯಕ್ರಮವು ರೈತರು ಮತ್ತು ಅಗ್ರಿ ಸ್ಟಾರ್ಟ್‌ಅಪ್‌ಗಳನ್ನು ಒಂದೇ ವೇದಿಕೆಯಲ್ಲಿ ತರುತ್ತದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕಾರ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ರೈತರು ಸೇರಲಿದ್ದಾರೆ. 732 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), 75 ಐಸಿಎಆರ್ ಸಂಸ್ಥೆಗಳು, 75 ರಾಜ್ಯ ಕೃಷಿ ವಿಶ್ವವಿದ್ಯಾಲಯಗಳು, 600 ಪಿಎಂ ಕಿಸಾನ್ ಕೇಂದ್ರಗಳು, 50,000 ಪ್ರಾಥಮಿಕ ಕೃಷಿ ಸಹಕಾರ ಸಂಘಗಳು (ಪಿಎಸಿಎಸ್), ಮತ್ತು 2 ಲಕ್ಷ ಸಮುದಾಯ ಸೇವಾ ಕೇಂದ್ರಗಳು (ಸಿಎಸ್‌ಸಿ) ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಒಂದು ರಾಷ್ಟ್ರ ಒಂದು ರಸಗೊಬ್ಬರ ಯೋಜನೆಯ ಮೂಲಕವಾಗಿ ರಸಗೊಬ್ಬರ ವಿತರಣೆಯ ಕ್ರಮ ಕೈಗೊಳ್ಳಲಾಗುತ್ತದೆ.
ರಾಷ್ಟ್ರದಾದ್ಯಂತ ರಸಗೊಬ್ಬರ ಬ್ರಾಂಡ್‌ಗಳನ್ನು “ಭಾರತ್” ಬ್ರಾಂಡ್‌ನಲ್ಲಿ ತಮ್ಮ ಸರಕುಗಳನ್ನು ಮಾರಾಟ ಮಾಡುವುದನ್ನು ಭಾರತ ಸರ್ಕಾರವು ಕಡ್ಡಾಯಗೊಳಿಸಿದೆ. ಸರ್ಕಾರದಿಂದ ಸಹಾಯಧನ ಲಭ್ಯವಾಗುವ ಗೊಬ್ಬರಗಳು ಭಾರತ್‌ ಬ್ರಾಂಡ್‌ ಮೂಲಕ ಮಾರುಕಟ್ಟೆಗೆ ರವಾನೆಯಾಗಬೇಕಿದೆ. ಅದು “ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಒಪಿ ಮತ್ತು ಭಾರತ್ ಎನ್‌ಪಿಕೆ ಆಗಿರಬೇಕು. ಅದರ ಮೊದಲ ಭಾಗವಾಗಿ ಪ್ರಧಾನಿಗಳು ಭಾರತ್‌ ಯೂರಿಯಾ ಬಿಡುಗಡೆ ಮಾಡಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

1 hour ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

2 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

2 hours ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

2 hours ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

2 hours ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

11 hours ago