(ಸಾಂದರ್ಭಿಕ ಚಿತ್ರ)
ಕೃಷಿ ಹಾಗೂ ರಸಗೊಬ್ಬರ ಸಚಿವಾಲಯ ಹಾಗೂ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ವತಿಯಿಂದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನವು ದೆಹಲಿಯಲ್ಲಿ ಅ.17 ರಿಂದ 2 ದಿನಗಳ ಕಾಲ ನಡೆಯಲಿದೆ. ಈ ಸಂದರ್ಭ ಭಾರತ್’ ಬ್ರ್ಯಾಂಡ್ನಡಿ ಯೂರಿಯೂ ಬಿಡುಗಡೆಯಾಗಲಿದೆ. ಇದೇ ವೇಳೆ ಕೇಂದ್ರ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.
ರೈತರಿಗೆ ಸಹಾಯಧನದ ಮೂಲಕ ವಿತರಣೆಯಾಗುವ ಗೊಬ್ಬರಗಳು ಒಂದು ರಾಷ್ಟ್ರ ಒಂದು ರಸಗೊಬ್ಬರ ಯೋಜನೆ ಅಡಿಯಲ್ಲಿ ಭಾರತ್ ಬ್ರಾಂಡ್ ಮೂಲಕ ವಿತರಣೆಯಾಗಲಿದೆ. “ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022” ಕಾರ್ಯಕ್ರಮದಲ್ಲಿ ರೈತರು, ಅಗ್ರಿ ಸ್ಟಾರ್ಟಪ್ಗಳು, ಸಂಶೋಧಕರು, ನೀತಿ ನಿರೂಪಕರು, ಬ್ಯಾಂಕರ್ಗಳು ಮತ್ತು ಬಂಡವಾಳಗಾರರು ಈ ಕಾರ್ಯಕ್ರಮದಲ್ಲಿ ಇರುತ್ತಾರೆ. ಈ ಕಾರ್ಯಕ್ರಮವು ರೈತರು ಮತ್ತು ಅಗ್ರಿ ಸ್ಟಾರ್ಟ್ಅಪ್ಗಳನ್ನು ಒಂದೇ ವೇದಿಕೆಯಲ್ಲಿ ತರುತ್ತದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ರೈತರು ಸೇರಲಿದ್ದಾರೆ. 732 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), 75 ಐಸಿಎಆರ್ ಸಂಸ್ಥೆಗಳು, 75 ರಾಜ್ಯ ಕೃಷಿ ವಿಶ್ವವಿದ್ಯಾಲಯಗಳು, 600 ಪಿಎಂ ಕಿಸಾನ್ ಕೇಂದ್ರಗಳು, 50,000 ಪ್ರಾಥಮಿಕ ಕೃಷಿ ಸಹಕಾರ ಸಂಘಗಳು (ಪಿಎಸಿಎಸ್), ಮತ್ತು 2 ಲಕ್ಷ ಸಮುದಾಯ ಸೇವಾ ಕೇಂದ್ರಗಳು (ಸಿಎಸ್ಸಿ) ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಒಂದು ರಾಷ್ಟ್ರ ಒಂದು ರಸಗೊಬ್ಬರ ಯೋಜನೆಯ ಮೂಲಕವಾಗಿ ರಸಗೊಬ್ಬರ ವಿತರಣೆಯ ಕ್ರಮ ಕೈಗೊಳ್ಳಲಾಗುತ್ತದೆ.
ರಾಷ್ಟ್ರದಾದ್ಯಂತ ರಸಗೊಬ್ಬರ ಬ್ರಾಂಡ್ಗಳನ್ನು “ಭಾರತ್” ಬ್ರಾಂಡ್ನಲ್ಲಿ ತಮ್ಮ ಸರಕುಗಳನ್ನು ಮಾರಾಟ ಮಾಡುವುದನ್ನು ಭಾರತ ಸರ್ಕಾರವು ಕಡ್ಡಾಯಗೊಳಿಸಿದೆ. ಸರ್ಕಾರದಿಂದ ಸಹಾಯಧನ ಲಭ್ಯವಾಗುವ ಗೊಬ್ಬರಗಳು ಭಾರತ್ ಬ್ರಾಂಡ್ ಮೂಲಕ ಮಾರುಕಟ್ಟೆಗೆ ರವಾನೆಯಾಗಬೇಕಿದೆ. ಅದು “ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಒಪಿ ಮತ್ತು ಭಾರತ್ ಎನ್ಪಿಕೆ ಆಗಿರಬೇಕು. ಅದರ ಮೊದಲ ಭಾಗವಾಗಿ ಪ್ರಧಾನಿಗಳು ಭಾರತ್ ಯೂರಿಯಾ ಬಿಡುಗಡೆ ಮಾಡಲಿದ್ದಾರೆ.
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…