Advertisement
ಸುದ್ದಿಗಳು

ಅ.17 ದೆಹಲಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022 | ‘ಭಾರತ್‌’ ಬ್ರ್ಯಾಂಡ್‌ ಯೂರಿಯಾ ಬಿಡುಗಡೆ | ಏನಿದು “ಭಾರತ್”‌ ಯೂರಿಯಾ ? |

Share

ಕೃಷಿ ಹಾಗೂ ರಸಗೊಬ್ಬರ ಸಚಿವಾಲಯ ಹಾಗೂ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ವತಿಯಿಂದ  ಪಿಎಂ ಕಿಸಾನ್‌ ಸಮ್ಮಾನ್‌ ಸಮ್ಮೇಳನವು ದೆಹಲಿಯಲ್ಲಿ ಅ.17 ರಿಂದ 2 ದಿನಗಳ ಕಾಲ ನಡೆಯಲಿದೆ. ಈ ಸಂದರ್ಭ ಭಾರತ್‌’ ಬ್ರ್ಯಾಂಡ್‌ನಡಿ ಯೂರಿಯೂ ಬಿಡುಗಡೆಯಾಗಲಿದೆ. ಇದೇ ವೇಳೆ ಕೇಂದ್ರ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

ರೈತರಿಗೆ ಸಹಾಯಧನದ ಮೂಲಕ ವಿತರಣೆಯಾಗುವ ಗೊಬ್ಬರಗಳು ಒಂದು ರಾಷ್ಟ್ರ ಒಂದು ರಸಗೊಬ್ಬರ ಯೋಜನೆ ಅಡಿಯಲ್ಲಿ ಭಾರತ್‌ ಬ್ರಾಂಡ್‌ ಮೂಲಕ ವಿತರಣೆಯಾಗಲಿದೆ. “ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022”  ಕಾರ್ಯಕ್ರಮದಲ್ಲಿ ರೈತರು, ಅಗ್ರಿ ಸ್ಟಾರ್ಟಪ್‌ಗಳು, ಸಂಶೋಧಕರು, ನೀತಿ ನಿರೂಪಕರು, ಬ್ಯಾಂಕರ್‌ಗಳು ಮತ್ತು ಬಂಡವಾಳಗಾರರು ಈ ಕಾರ್ಯಕ್ರಮದಲ್ಲಿ ಇರುತ್ತಾರೆ. ಈ ಕಾರ್ಯಕ್ರಮವು ರೈತರು ಮತ್ತು ಅಗ್ರಿ ಸ್ಟಾರ್ಟ್‌ಅಪ್‌ಗಳನ್ನು ಒಂದೇ ವೇದಿಕೆಯಲ್ಲಿ ತರುತ್ತದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕಾರ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ರೈತರು ಸೇರಲಿದ್ದಾರೆ. 732 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), 75 ಐಸಿಎಆರ್ ಸಂಸ್ಥೆಗಳು, 75 ರಾಜ್ಯ ಕೃಷಿ ವಿಶ್ವವಿದ್ಯಾಲಯಗಳು, 600 ಪಿಎಂ ಕಿಸಾನ್ ಕೇಂದ್ರಗಳು, 50,000 ಪ್ರಾಥಮಿಕ ಕೃಷಿ ಸಹಕಾರ ಸಂಘಗಳು (ಪಿಎಸಿಎಸ್), ಮತ್ತು 2 ಲಕ್ಷ ಸಮುದಾಯ ಸೇವಾ ಕೇಂದ್ರಗಳು (ಸಿಎಸ್‌ಸಿ) ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಒಂದು ರಾಷ್ಟ್ರ ಒಂದು ರಸಗೊಬ್ಬರ ಯೋಜನೆಯ ಮೂಲಕವಾಗಿ ರಸಗೊಬ್ಬರ ವಿತರಣೆಯ ಕ್ರಮ ಕೈಗೊಳ್ಳಲಾಗುತ್ತದೆ.
ರಾಷ್ಟ್ರದಾದ್ಯಂತ ರಸಗೊಬ್ಬರ ಬ್ರಾಂಡ್‌ಗಳನ್ನು “ಭಾರತ್” ಬ್ರಾಂಡ್‌ನಲ್ಲಿ ತಮ್ಮ ಸರಕುಗಳನ್ನು ಮಾರಾಟ ಮಾಡುವುದನ್ನು ಭಾರತ ಸರ್ಕಾರವು ಕಡ್ಡಾಯಗೊಳಿಸಿದೆ. ಸರ್ಕಾರದಿಂದ ಸಹಾಯಧನ ಲಭ್ಯವಾಗುವ ಗೊಬ್ಬರಗಳು ಭಾರತ್‌ ಬ್ರಾಂಡ್‌ ಮೂಲಕ ಮಾರುಕಟ್ಟೆಗೆ ರವಾನೆಯಾಗಬೇಕಿದೆ. ಅದು “ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಒಪಿ ಮತ್ತು ಭಾರತ್ ಎನ್‌ಪಿಕೆ ಆಗಿರಬೇಕು. ಅದರ ಮೊದಲ ಭಾಗವಾಗಿ ಪ್ರಧಾನಿಗಳು ಭಾರತ್‌ ಯೂರಿಯಾ ಬಿಡುಗಡೆ ಮಾಡಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

7 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

8 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

10 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

11 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

18 hours ago