Advertisement
ಸುದ್ದಿಗಳು

ಅ.17 ದೆಹಲಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022 | ‘ಭಾರತ್‌’ ಬ್ರ್ಯಾಂಡ್‌ ಯೂರಿಯಾ ಬಿಡುಗಡೆ | ಏನಿದು “ಭಾರತ್”‌ ಯೂರಿಯಾ ? |

Share

ಕೃಷಿ ಹಾಗೂ ರಸಗೊಬ್ಬರ ಸಚಿವಾಲಯ ಹಾಗೂ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ವತಿಯಿಂದ  ಪಿಎಂ ಕಿಸಾನ್‌ ಸಮ್ಮಾನ್‌ ಸಮ್ಮೇಳನವು ದೆಹಲಿಯಲ್ಲಿ ಅ.17 ರಿಂದ 2 ದಿನಗಳ ಕಾಲ ನಡೆಯಲಿದೆ. ಈ ಸಂದರ್ಭ ಭಾರತ್‌’ ಬ್ರ್ಯಾಂಡ್‌ನಡಿ ಯೂರಿಯೂ ಬಿಡುಗಡೆಯಾಗಲಿದೆ. ಇದೇ ವೇಳೆ ಕೇಂದ್ರ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

ರೈತರಿಗೆ ಸಹಾಯಧನದ ಮೂಲಕ ವಿತರಣೆಯಾಗುವ ಗೊಬ್ಬರಗಳು ಒಂದು ರಾಷ್ಟ್ರ ಒಂದು ರಸಗೊಬ್ಬರ ಯೋಜನೆ ಅಡಿಯಲ್ಲಿ ಭಾರತ್‌ ಬ್ರಾಂಡ್‌ ಮೂಲಕ ವಿತರಣೆಯಾಗಲಿದೆ. “ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022”  ಕಾರ್ಯಕ್ರಮದಲ್ಲಿ ರೈತರು, ಅಗ್ರಿ ಸ್ಟಾರ್ಟಪ್‌ಗಳು, ಸಂಶೋಧಕರು, ನೀತಿ ನಿರೂಪಕರು, ಬ್ಯಾಂಕರ್‌ಗಳು ಮತ್ತು ಬಂಡವಾಳಗಾರರು ಈ ಕಾರ್ಯಕ್ರಮದಲ್ಲಿ ಇರುತ್ತಾರೆ. ಈ ಕಾರ್ಯಕ್ರಮವು ರೈತರು ಮತ್ತು ಅಗ್ರಿ ಸ್ಟಾರ್ಟ್‌ಅಪ್‌ಗಳನ್ನು ಒಂದೇ ವೇದಿಕೆಯಲ್ಲಿ ತರುತ್ತದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕಾರ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ರೈತರು ಸೇರಲಿದ್ದಾರೆ. 732 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), 75 ಐಸಿಎಆರ್ ಸಂಸ್ಥೆಗಳು, 75 ರಾಜ್ಯ ಕೃಷಿ ವಿಶ್ವವಿದ್ಯಾಲಯಗಳು, 600 ಪಿಎಂ ಕಿಸಾನ್ ಕೇಂದ್ರಗಳು, 50,000 ಪ್ರಾಥಮಿಕ ಕೃಷಿ ಸಹಕಾರ ಸಂಘಗಳು (ಪಿಎಸಿಎಸ್), ಮತ್ತು 2 ಲಕ್ಷ ಸಮುದಾಯ ಸೇವಾ ಕೇಂದ್ರಗಳು (ಸಿಎಸ್‌ಸಿ) ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಒಂದು ರಾಷ್ಟ್ರ ಒಂದು ರಸಗೊಬ್ಬರ ಯೋಜನೆಯ ಮೂಲಕವಾಗಿ ರಸಗೊಬ್ಬರ ವಿತರಣೆಯ ಕ್ರಮ ಕೈಗೊಳ್ಳಲಾಗುತ್ತದೆ.
ರಾಷ್ಟ್ರದಾದ್ಯಂತ ರಸಗೊಬ್ಬರ ಬ್ರಾಂಡ್‌ಗಳನ್ನು “ಭಾರತ್” ಬ್ರಾಂಡ್‌ನಲ್ಲಿ ತಮ್ಮ ಸರಕುಗಳನ್ನು ಮಾರಾಟ ಮಾಡುವುದನ್ನು ಭಾರತ ಸರ್ಕಾರವು ಕಡ್ಡಾಯಗೊಳಿಸಿದೆ. ಸರ್ಕಾರದಿಂದ ಸಹಾಯಧನ ಲಭ್ಯವಾಗುವ ಗೊಬ್ಬರಗಳು ಭಾರತ್‌ ಬ್ರಾಂಡ್‌ ಮೂಲಕ ಮಾರುಕಟ್ಟೆಗೆ ರವಾನೆಯಾಗಬೇಕಿದೆ. ಅದು “ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಒಪಿ ಮತ್ತು ಭಾರತ್ ಎನ್‌ಪಿಕೆ ಆಗಿರಬೇಕು. ಅದರ ಮೊದಲ ಭಾಗವಾಗಿ ಪ್ರಧಾನಿಗಳು ಭಾರತ್‌ ಯೂರಿಯಾ ಬಿಡುಗಡೆ ಮಾಡಲಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

8 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

13 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

18 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago