ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆ | ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿ ಅನುಷ್ಠಾನ

November 9, 2024
7:33 AM

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು, ಬೀದಿ ಬದಿಯ ವ್ಯಾಪಾರಿಗಳಿಗೆ ವರದಾನವಾಗಿದೆ ಎಂದು ಯಾದಗಿರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ ಹೇಳಿದ್ದಾರೆ.

ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಸಹಕಾರಿಯಾಗಿದೆ. ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು ಹಣ್ಣು, ತರಕಾರಿ, ಸೊಪ್ಪು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬಿಯಾಗುವತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂದರು.  ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ 4929 ಮಂದಿ ಪಿಎಂ ಸ್ವನಿಧಿ ಯೋಜನೆಯಡಿ ಕಿರು ಸಾಲ ಪಡೆದಿದ್ದು, ಬಹುತೇಕರು ಮೊದಲ ಹಾಗೂ ಎರಡನೇ ಮತ್ತು ಮೂರನೇ ಹಂತದಲ್ಲಿ ಪಡೆದ ಸಾಲವನ್ನು ಮರು ಪಾವತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ಸಾಲ ಸೌಲಭ್ಯವನ್ನು ಪಡೆದು ಹಾಲು, ಪತ್ರಿಕೆ ಸೇರಿದಂತೆ ವಿವಿಧ ಸ್ವ-ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror