ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು, ಬೀದಿ ಬದಿಯ ವ್ಯಾಪಾರಿಗಳಿಗೆ ವರದಾನವಾಗಿದೆ ಎಂದು ಯಾದಗಿರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ ಹೇಳಿದ್ದಾರೆ.
ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಸಹಕಾರಿಯಾಗಿದೆ. ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು ಹಣ್ಣು, ತರಕಾರಿ, ಸೊಪ್ಪು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬಿಯಾಗುವತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂದರು. ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ 4929 ಮಂದಿ ಪಿಎಂ ಸ್ವನಿಧಿ ಯೋಜನೆಯಡಿ ಕಿರು ಸಾಲ ಪಡೆದಿದ್ದು, ಬಹುತೇಕರು ಮೊದಲ ಹಾಗೂ ಎರಡನೇ ಮತ್ತು ಮೂರನೇ ಹಂತದಲ್ಲಿ ಪಡೆದ ಸಾಲವನ್ನು ಮರು ಪಾವತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ಸಾಲ ಸೌಲಭ್ಯವನ್ನು ಪಡೆದು ಹಾಲು, ಪತ್ರಿಕೆ ಸೇರಿದಂತೆ ವಿವಿಧ ಸ್ವ-ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…