ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು, ಬೀದಿ ಬದಿಯ ವ್ಯಾಪಾರಿಗಳಿಗೆ ವರದಾನವಾಗಿದೆ ಎಂದು ಯಾದಗಿರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ ಹೇಳಿದ್ದಾರೆ.
ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಸಹಕಾರಿಯಾಗಿದೆ. ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು ಹಣ್ಣು, ತರಕಾರಿ, ಸೊಪ್ಪು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬಿಯಾಗುವತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂದರು. ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ 4929 ಮಂದಿ ಪಿಎಂ ಸ್ವನಿಧಿ ಯೋಜನೆಯಡಿ ಕಿರು ಸಾಲ ಪಡೆದಿದ್ದು, ಬಹುತೇಕರು ಮೊದಲ ಹಾಗೂ ಎರಡನೇ ಮತ್ತು ಮೂರನೇ ಹಂತದಲ್ಲಿ ಪಡೆದ ಸಾಲವನ್ನು ಮರು ಪಾವತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ಸಾಲ ಸೌಲಭ್ಯವನ್ನು ಪಡೆದು ಹಾಲು, ಪತ್ರಿಕೆ ಸೇರಿದಂತೆ ವಿವಿಧ ಸ್ವ-ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…