ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು, ಬೀದಿ ಬದಿಯ ವ್ಯಾಪಾರಿಗಳಿಗೆ ವರದಾನವಾಗಿದೆ ಎಂದು ಯಾದಗಿರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ ಹೇಳಿದ್ದಾರೆ.
ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಸಹಕಾರಿಯಾಗಿದೆ. ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು ಹಣ್ಣು, ತರಕಾರಿ, ಸೊಪ್ಪು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬಿಯಾಗುವತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂದರು. ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ 4929 ಮಂದಿ ಪಿಎಂ ಸ್ವನಿಧಿ ಯೋಜನೆಯಡಿ ಕಿರು ಸಾಲ ಪಡೆದಿದ್ದು, ಬಹುತೇಕರು ಮೊದಲ ಹಾಗೂ ಎರಡನೇ ಮತ್ತು ಮೂರನೇ ಹಂತದಲ್ಲಿ ಪಡೆದ ಸಾಲವನ್ನು ಮರು ಪಾವತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ಸಾಲ ಸೌಲಭ್ಯವನ್ನು ಪಡೆದು ಹಾಲು, ಪತ್ರಿಕೆ ಸೇರಿದಂತೆ ವಿವಿಧ ಸ್ವ-ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…