#PMFBY | ಫಾಲೋಅಪ್‌ | ಅಡಿಕೆ ಕೃಷಿಕರಿಗೆ ಫಸಲು ವಿಮಾ ಯೋಜನೆ | ಸ್ವಲ್ಪ ಕಾಯಿರಿ ಅಡಿಕೆಗೂ ಬರುತ್ತದೆ ವಿಮೆ.. |

June 24, 2023
10:44 PM

ಹವಾಮಾನ ವೈಪರೀತ್ಯದ ಕಾರಣದಿಂದ ನಾಶವಾಗುವ ಕೃಷಿಗೆ ಪರಿಹಾರವಾಗಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯ ಬಗ್ಗೆ ಈ ಬಾರಿ ಕೃಷಿಕರಲ್ಲಿ ಸಾಕಷ್ಟು ಗೊಂದಲಗಳು ಇದೆ. ಅದರಲ್ಲೂ ಅಡಿಕೆ ಬೆಳೆಗಾರರಿಗೆ ತಮ್ಮ ಬೆಳೆಗೆ ವಿಮೆ ಈ ಬಾರಿ ಇಲ್ಲ ಎನ್ನುವ ಗೊಂದಲ ಇತ್ತು. ಈಗಲೂ ಗೊಂದಲ ಮುಗಿದಿಲ್ಲ. ಆದರೆ ಅಡಿಕೆಗೂ ವಿಮೆ ಬರುತ್ತದೆ ಎನ್ನುವುದು ಅಧಿಕಾರಿಗಳ ಭರವಸೆ.

Advertisement

ಅಡಿಕೆಗೆ ಹವಾಮಾನ ಆಧಾರಿತ ಫಸಲು ವಿಮಾ ಯೋಜನೆ ಜಾರಿಯಲ್ಲಿದೆ. ಈ ಬಾರಿ ಜೂನ್‌ ಅಂತ್ಯವಾದರೂ ಈ ಯೋಜನೆ ಜಾರಿಯಾಗಿಲ್ಲ. ಇದೀಗ ಅಡಿಕೆ ಹೊರತುಪಡಿಸಿ ಇತರ 36 ಬೆಳೆಗಳಿಗೆ ಫಸಲ್‌ ಭೀಮಾ ಯೋಜನೆಗೆ ಚಾಲನೆ ದೊರೆತಿದೆ. ಈ ಬಾರಿ ಅಡಿಕೆಯನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆತಂಕ ಕೃಷಿಕರಲ್ಲಿತ್ತು. ಹವಾಮಾನ ವೈಪರೀತ್ಯದ ಕಾರಣದಿಂದ ಕೃಷಿಗೆ ಹಾನಿಯಾದರೆ ಸರ್ಕಾರದ ಮುಂದೆ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಬೇಕಾಗಿಲ್ಲ, ಬೆಳೆವಿಮೆಯ ಹಣ ನಿಶ್ಚಿತವಾಗಿಯೂ ಬರುವುದರಿಂದ ಕೃಷಿಕರು ಬೆಳೆ ನಷ್ಟವನ್ನು ಸುಧಾರಿಸಿಕೊಳ್ಳುತ್ತಿದ್ದರು. ಹೀಗಾಗಿ ಬೆಳೆ ವಿಮೆಯ ಕಡೆಗೆ ಈಚೆಗೆ ಹೆಚ್ಚಿನ ಕೃಷಿಕರು ಆಸಕ್ತರಾಗಿದ್ದರು. ಇದೀಗ ಸರ್ಕಾರಕ್ಕೆ ಇಲ್ಲಿ ಆಗಿರುವ ವಿಳಂಬ ಹಾಗೂ ಲೋಪದ ಬಗ್ಗೆ ಮನವರಿಕೆ ಮಾಡುವ ಕೆಲಸಗಳು ನಡೆಯುತ್ತಿದೆ. ಈ ನಡುವೆಯೇ ವಿಮಾ ಕಂಪನಿಯ ಗುರುತು ಮಾಡಲಾಗಿದ್ದು, ಮುಂದಿನ ತಿಂಗಳ ಒಳಗೆ ಪ್ರೀಮಿಯಂ ಕಟ್ಟಲು ಅವಕಾಶ ಇರುತ್ತದೆ ಎನ್ನುವುದು ಅಧಿಕಾರಿಗಳ ವಿಶ್ವಾಸ.

ಕಳೆದ ಎರಡು ವರ್ಷಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಈ ವಿಮೆ ಉಪಯುಕ್ತವಾಗಿತ್ತು. ಒಂದು ಹೆಕ್ಟೇರ್ ಅಡಿಕೆ ಬೆಳೆ ವಿಮೆಗೆ ರೈತರು ರೂ.6400,ರಾಜ್ಯ ಸರ್ಕಾರ 75% ಮತ್ತು ಕೇಂದ್ರ ಸರ್ಕಾರ 25% ಒಟ್ಟು ಮೊತ್ತ ರೂ 65,202 ಪಾವತಿಸುತ್ತದೆ.ರೈತರ ಆಪತ್ತಿಗೆ ಸರಕಾರ ತಂದ ಬೆಳೆ ವಿಮಾ ಯೋಜನೆ ನೆರವಾಗಿತ್ತು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror