#PMFBY | ಫಾಲೋಅಪ್‌ | ಅಡಿಕೆ ಕೃಷಿಕರಿಗೆ ಫಸಲು ವಿಮಾ ಯೋಜನೆ | ಸ್ವಲ್ಪ ಕಾಯಿರಿ ಅಡಿಕೆಗೂ ಬರುತ್ತದೆ ವಿಮೆ.. |

June 24, 2023
10:44 PM

ಹವಾಮಾನ ವೈಪರೀತ್ಯದ ಕಾರಣದಿಂದ ನಾಶವಾಗುವ ಕೃಷಿಗೆ ಪರಿಹಾರವಾಗಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯ ಬಗ್ಗೆ ಈ ಬಾರಿ ಕೃಷಿಕರಲ್ಲಿ ಸಾಕಷ್ಟು ಗೊಂದಲಗಳು ಇದೆ. ಅದರಲ್ಲೂ ಅಡಿಕೆ ಬೆಳೆಗಾರರಿಗೆ ತಮ್ಮ ಬೆಳೆಗೆ ವಿಮೆ ಈ ಬಾರಿ ಇಲ್ಲ ಎನ್ನುವ ಗೊಂದಲ ಇತ್ತು. ಈಗಲೂ ಗೊಂದಲ ಮುಗಿದಿಲ್ಲ. ಆದರೆ ಅಡಿಕೆಗೂ ವಿಮೆ ಬರುತ್ತದೆ ಎನ್ನುವುದು ಅಧಿಕಾರಿಗಳ ಭರವಸೆ.

ಅಡಿಕೆಗೆ ಹವಾಮಾನ ಆಧಾರಿತ ಫಸಲು ವಿಮಾ ಯೋಜನೆ ಜಾರಿಯಲ್ಲಿದೆ. ಈ ಬಾರಿ ಜೂನ್‌ ಅಂತ್ಯವಾದರೂ ಈ ಯೋಜನೆ ಜಾರಿಯಾಗಿಲ್ಲ. ಇದೀಗ ಅಡಿಕೆ ಹೊರತುಪಡಿಸಿ ಇತರ 36 ಬೆಳೆಗಳಿಗೆ ಫಸಲ್‌ ಭೀಮಾ ಯೋಜನೆಗೆ ಚಾಲನೆ ದೊರೆತಿದೆ. ಈ ಬಾರಿ ಅಡಿಕೆಯನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆತಂಕ ಕೃಷಿಕರಲ್ಲಿತ್ತು. ಹವಾಮಾನ ವೈಪರೀತ್ಯದ ಕಾರಣದಿಂದ ಕೃಷಿಗೆ ಹಾನಿಯಾದರೆ ಸರ್ಕಾರದ ಮುಂದೆ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಬೇಕಾಗಿಲ್ಲ, ಬೆಳೆವಿಮೆಯ ಹಣ ನಿಶ್ಚಿತವಾಗಿಯೂ ಬರುವುದರಿಂದ ಕೃಷಿಕರು ಬೆಳೆ ನಷ್ಟವನ್ನು ಸುಧಾರಿಸಿಕೊಳ್ಳುತ್ತಿದ್ದರು. ಹೀಗಾಗಿ ಬೆಳೆ ವಿಮೆಯ ಕಡೆಗೆ ಈಚೆಗೆ ಹೆಚ್ಚಿನ ಕೃಷಿಕರು ಆಸಕ್ತರಾಗಿದ್ದರು. ಇದೀಗ ಸರ್ಕಾರಕ್ಕೆ ಇಲ್ಲಿ ಆಗಿರುವ ವಿಳಂಬ ಹಾಗೂ ಲೋಪದ ಬಗ್ಗೆ ಮನವರಿಕೆ ಮಾಡುವ ಕೆಲಸಗಳು ನಡೆಯುತ್ತಿದೆ. ಈ ನಡುವೆಯೇ ವಿಮಾ ಕಂಪನಿಯ ಗುರುತು ಮಾಡಲಾಗಿದ್ದು, ಮುಂದಿನ ತಿಂಗಳ ಒಳಗೆ ಪ್ರೀಮಿಯಂ ಕಟ್ಟಲು ಅವಕಾಶ ಇರುತ್ತದೆ ಎನ್ನುವುದು ಅಧಿಕಾರಿಗಳ ವಿಶ್ವಾಸ.

Advertisement

ಕಳೆದ ಎರಡು ವರ್ಷಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಈ ವಿಮೆ ಉಪಯುಕ್ತವಾಗಿತ್ತು. ಒಂದು ಹೆಕ್ಟೇರ್ ಅಡಿಕೆ ಬೆಳೆ ವಿಮೆಗೆ ರೈತರು ರೂ.6400,ರಾಜ್ಯ ಸರ್ಕಾರ 75% ಮತ್ತು ಕೇಂದ್ರ ಸರ್ಕಾರ 25% ಒಟ್ಟು ಮೊತ್ತ ರೂ 65,202 ಪಾವತಿಸುತ್ತದೆ.ರೈತರ ಆಪತ್ತಿಗೆ ಸರಕಾರ ತಂದ ಬೆಳೆ ವಿಮಾ ಯೋಜನೆ ನೆರವಾಗಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ
July 1, 2026
2:57 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!
July 1, 2026
11:29 AM
by: ಸಾಯಿಶೇಖರ್ ಕರಿಕಳ
ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ
July 1, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ
July 1, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror