Advertisement
ಸುದ್ದಿಗಳು

#PMFBY | ಫಾಲೋಅಪ್‌ | ಅಡಿಕೆ ಕೃಷಿಕರಿಗೆ ಫಸಲು ವಿಮಾ ಯೋಜನೆ | ಸ್ವಲ್ಪ ಕಾಯಿರಿ ಅಡಿಕೆಗೂ ಬರುತ್ತದೆ ವಿಮೆ.. |

Share

ಹವಾಮಾನ ವೈಪರೀತ್ಯದ ಕಾರಣದಿಂದ ನಾಶವಾಗುವ ಕೃಷಿಗೆ ಪರಿಹಾರವಾಗಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯ ಬಗ್ಗೆ ಈ ಬಾರಿ ಕೃಷಿಕರಲ್ಲಿ ಸಾಕಷ್ಟು ಗೊಂದಲಗಳು ಇದೆ. ಅದರಲ್ಲೂ ಅಡಿಕೆ ಬೆಳೆಗಾರರಿಗೆ ತಮ್ಮ ಬೆಳೆಗೆ ವಿಮೆ ಈ ಬಾರಿ ಇಲ್ಲ ಎನ್ನುವ ಗೊಂದಲ ಇತ್ತು. ಈಗಲೂ ಗೊಂದಲ ಮುಗಿದಿಲ್ಲ. ಆದರೆ ಅಡಿಕೆಗೂ ವಿಮೆ ಬರುತ್ತದೆ ಎನ್ನುವುದು ಅಧಿಕಾರಿಗಳ ಭರವಸೆ.

ಅಡಿಕೆಗೆ ಹವಾಮಾನ ಆಧಾರಿತ ಫಸಲು ವಿಮಾ ಯೋಜನೆ ಜಾರಿಯಲ್ಲಿದೆ. ಈ ಬಾರಿ ಜೂನ್‌ ಅಂತ್ಯವಾದರೂ ಈ ಯೋಜನೆ ಜಾರಿಯಾಗಿಲ್ಲ. ಇದೀಗ ಅಡಿಕೆ ಹೊರತುಪಡಿಸಿ ಇತರ 36 ಬೆಳೆಗಳಿಗೆ ಫಸಲ್‌ ಭೀಮಾ ಯೋಜನೆಗೆ ಚಾಲನೆ ದೊರೆತಿದೆ. ಈ ಬಾರಿ ಅಡಿಕೆಯನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆತಂಕ ಕೃಷಿಕರಲ್ಲಿತ್ತು. ಹವಾಮಾನ ವೈಪರೀತ್ಯದ ಕಾರಣದಿಂದ ಕೃಷಿಗೆ ಹಾನಿಯಾದರೆ ಸರ್ಕಾರದ ಮುಂದೆ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಬೇಕಾಗಿಲ್ಲ, ಬೆಳೆವಿಮೆಯ ಹಣ ನಿಶ್ಚಿತವಾಗಿಯೂ ಬರುವುದರಿಂದ ಕೃಷಿಕರು ಬೆಳೆ ನಷ್ಟವನ್ನು ಸುಧಾರಿಸಿಕೊಳ್ಳುತ್ತಿದ್ದರು. ಹೀಗಾಗಿ ಬೆಳೆ ವಿಮೆಯ ಕಡೆಗೆ ಈಚೆಗೆ ಹೆಚ್ಚಿನ ಕೃಷಿಕರು ಆಸಕ್ತರಾಗಿದ್ದರು. ಇದೀಗ ಸರ್ಕಾರಕ್ಕೆ ಇಲ್ಲಿ ಆಗಿರುವ ವಿಳಂಬ ಹಾಗೂ ಲೋಪದ ಬಗ್ಗೆ ಮನವರಿಕೆ ಮಾಡುವ ಕೆಲಸಗಳು ನಡೆಯುತ್ತಿದೆ. ಈ ನಡುವೆಯೇ ವಿಮಾ ಕಂಪನಿಯ ಗುರುತು ಮಾಡಲಾಗಿದ್ದು, ಮುಂದಿನ ತಿಂಗಳ ಒಳಗೆ ಪ್ರೀಮಿಯಂ ಕಟ್ಟಲು ಅವಕಾಶ ಇರುತ್ತದೆ ಎನ್ನುವುದು ಅಧಿಕಾರಿಗಳ ವಿಶ್ವಾಸ.

ಕಳೆದ ಎರಡು ವರ್ಷಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಈ ವಿಮೆ ಉಪಯುಕ್ತವಾಗಿತ್ತು. ಒಂದು ಹೆಕ್ಟೇರ್ ಅಡಿಕೆ ಬೆಳೆ ವಿಮೆಗೆ ರೈತರು ರೂ.6400,ರಾಜ್ಯ ಸರ್ಕಾರ 75% ಮತ್ತು ಕೇಂದ್ರ ಸರ್ಕಾರ 25% ಒಟ್ಟು ಮೊತ್ತ ರೂ 65,202 ಪಾವತಿಸುತ್ತದೆ.ರೈತರ ಆಪತ್ತಿಗೆ ಸರಕಾರ ತಂದ ಬೆಳೆ ವಿಮಾ ಯೋಜನೆ ನೆರವಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

3 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

4 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

5 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

6 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

19 hours ago