ಸುದ್ದಿಗಳು

#PMFBY | ಫಾಲೋಅಪ್‌ | ಅಡಿಕೆ ಕೃಷಿಕರಿಗೆ ಫಸಲು ವಿಮಾ ಯೋಜನೆ | ಸ್ವಲ್ಪ ಕಾಯಿರಿ ಅಡಿಕೆಗೂ ಬರುತ್ತದೆ ವಿಮೆ.. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹವಾಮಾನ ವೈಪರೀತ್ಯದ ಕಾರಣದಿಂದ ನಾಶವಾಗುವ ಕೃಷಿಗೆ ಪರಿಹಾರವಾಗಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯ ಬಗ್ಗೆ ಈ ಬಾರಿ ಕೃಷಿಕರಲ್ಲಿ ಸಾಕಷ್ಟು ಗೊಂದಲಗಳು ಇದೆ. ಅದರಲ್ಲೂ ಅಡಿಕೆ ಬೆಳೆಗಾರರಿಗೆ ತಮ್ಮ ಬೆಳೆಗೆ ವಿಮೆ ಈ ಬಾರಿ ಇಲ್ಲ ಎನ್ನುವ ಗೊಂದಲ ಇತ್ತು. ಈಗಲೂ ಗೊಂದಲ ಮುಗಿದಿಲ್ಲ. ಆದರೆ ಅಡಿಕೆಗೂ ವಿಮೆ ಬರುತ್ತದೆ ಎನ್ನುವುದು ಅಧಿಕಾರಿಗಳ ಭರವಸೆ.

Advertisement
Advertisement

ಅಡಿಕೆಗೆ ಹವಾಮಾನ ಆಧಾರಿತ ಫಸಲು ವಿಮಾ ಯೋಜನೆ ಜಾರಿಯಲ್ಲಿದೆ. ಈ ಬಾರಿ ಜೂನ್‌ ಅಂತ್ಯವಾದರೂ ಈ ಯೋಜನೆ ಜಾರಿಯಾಗಿಲ್ಲ. ಇದೀಗ ಅಡಿಕೆ ಹೊರತುಪಡಿಸಿ ಇತರ 36 ಬೆಳೆಗಳಿಗೆ ಫಸಲ್‌ ಭೀಮಾ ಯೋಜನೆಗೆ ಚಾಲನೆ ದೊರೆತಿದೆ. ಈ ಬಾರಿ ಅಡಿಕೆಯನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆತಂಕ ಕೃಷಿಕರಲ್ಲಿತ್ತು. ಹವಾಮಾನ ವೈಪರೀತ್ಯದ ಕಾರಣದಿಂದ ಕೃಷಿಗೆ ಹಾನಿಯಾದರೆ ಸರ್ಕಾರದ ಮುಂದೆ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಬೇಕಾಗಿಲ್ಲ, ಬೆಳೆವಿಮೆಯ ಹಣ ನಿಶ್ಚಿತವಾಗಿಯೂ ಬರುವುದರಿಂದ ಕೃಷಿಕರು ಬೆಳೆ ನಷ್ಟವನ್ನು ಸುಧಾರಿಸಿಕೊಳ್ಳುತ್ತಿದ್ದರು. ಹೀಗಾಗಿ ಬೆಳೆ ವಿಮೆಯ ಕಡೆಗೆ ಈಚೆಗೆ ಹೆಚ್ಚಿನ ಕೃಷಿಕರು ಆಸಕ್ತರಾಗಿದ್ದರು. ಇದೀಗ ಸರ್ಕಾರಕ್ಕೆ ಇಲ್ಲಿ ಆಗಿರುವ ವಿಳಂಬ ಹಾಗೂ ಲೋಪದ ಬಗ್ಗೆ ಮನವರಿಕೆ ಮಾಡುವ ಕೆಲಸಗಳು ನಡೆಯುತ್ತಿದೆ. ಈ ನಡುವೆಯೇ ವಿಮಾ ಕಂಪನಿಯ ಗುರುತು ಮಾಡಲಾಗಿದ್ದು, ಮುಂದಿನ ತಿಂಗಳ ಒಳಗೆ ಪ್ರೀಮಿಯಂ ಕಟ್ಟಲು ಅವಕಾಶ ಇರುತ್ತದೆ ಎನ್ನುವುದು ಅಧಿಕಾರಿಗಳ ವಿಶ್ವಾಸ.

ಕಳೆದ ಎರಡು ವರ್ಷಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಈ ವಿಮೆ ಉಪಯುಕ್ತವಾಗಿತ್ತು. ಒಂದು ಹೆಕ್ಟೇರ್ ಅಡಿಕೆ ಬೆಳೆ ವಿಮೆಗೆ ರೈತರು ರೂ.6400,ರಾಜ್ಯ ಸರ್ಕಾರ 75% ಮತ್ತು ಕೇಂದ್ರ ಸರ್ಕಾರ 25% ಒಟ್ಟು ಮೊತ್ತ ರೂ 65,202 ಪಾವತಿಸುತ್ತದೆ.ರೈತರ ಆಪತ್ತಿಗೆ ಸರಕಾರ ತಂದ ಬೆಳೆ ವಿಮಾ ಯೋಜನೆ ನೆರವಾಗಿತ್ತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

2 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

8 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

8 hours ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

9 hours ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

9 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

11 hours ago