ಹವಾಮಾನ ವೈಪರೀತ್ಯದ ಕಾರಣದಿಂದ ನಾಶವಾಗುವ ಕೃಷಿಗೆ ಪರಿಹಾರವಾಗಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬಗ್ಗೆ ಈ ಬಾರಿ ಕೃಷಿಕರಲ್ಲಿ ಸಾಕಷ್ಟು ಗೊಂದಲಗಳು ಇದೆ. ಅದರಲ್ಲೂ ಅಡಿಕೆ ಬೆಳೆಗಾರರಿಗೆ ತಮ್ಮ ಬೆಳೆಗೆ ವಿಮೆ ಈ ಬಾರಿ ಇಲ್ಲ ಎನ್ನುವ ಗೊಂದಲ ಇತ್ತು. ಈಗಲೂ ಗೊಂದಲ ಮುಗಿದಿಲ್ಲ. ಆದರೆ ಅಡಿಕೆಗೂ ವಿಮೆ ಬರುತ್ತದೆ ಎನ್ನುವುದು ಅಧಿಕಾರಿಗಳ ಭರವಸೆ.
ಅಡಿಕೆಗೆ ಹವಾಮಾನ ಆಧಾರಿತ ಫಸಲು ವಿಮಾ ಯೋಜನೆ ಜಾರಿಯಲ್ಲಿದೆ. ಈ ಬಾರಿ ಜೂನ್ ಅಂತ್ಯವಾದರೂ ಈ ಯೋಜನೆ ಜಾರಿಯಾಗಿಲ್ಲ. ಇದೀಗ ಅಡಿಕೆ ಹೊರತುಪಡಿಸಿ ಇತರ 36 ಬೆಳೆಗಳಿಗೆ ಫಸಲ್ ಭೀಮಾ ಯೋಜನೆಗೆ ಚಾಲನೆ ದೊರೆತಿದೆ. ಈ ಬಾರಿ ಅಡಿಕೆಯನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆತಂಕ ಕೃಷಿಕರಲ್ಲಿತ್ತು. ಹವಾಮಾನ ವೈಪರೀತ್ಯದ ಕಾರಣದಿಂದ ಕೃಷಿಗೆ ಹಾನಿಯಾದರೆ ಸರ್ಕಾರದ ಮುಂದೆ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಬೇಕಾಗಿಲ್ಲ, ಬೆಳೆವಿಮೆಯ ಹಣ ನಿಶ್ಚಿತವಾಗಿಯೂ ಬರುವುದರಿಂದ ಕೃಷಿಕರು ಬೆಳೆ ನಷ್ಟವನ್ನು ಸುಧಾರಿಸಿಕೊಳ್ಳುತ್ತಿದ್ದರು. ಹೀಗಾಗಿ ಬೆಳೆ ವಿಮೆಯ ಕಡೆಗೆ ಈಚೆಗೆ ಹೆಚ್ಚಿನ ಕೃಷಿಕರು ಆಸಕ್ತರಾಗಿದ್ದರು. ಇದೀಗ ಸರ್ಕಾರಕ್ಕೆ ಇಲ್ಲಿ ಆಗಿರುವ ವಿಳಂಬ ಹಾಗೂ ಲೋಪದ ಬಗ್ಗೆ ಮನವರಿಕೆ ಮಾಡುವ ಕೆಲಸಗಳು ನಡೆಯುತ್ತಿದೆ. ಈ ನಡುವೆಯೇ ವಿಮಾ ಕಂಪನಿಯ ಗುರುತು ಮಾಡಲಾಗಿದ್ದು, ಮುಂದಿನ ತಿಂಗಳ ಒಳಗೆ ಪ್ರೀಮಿಯಂ ಕಟ್ಟಲು ಅವಕಾಶ ಇರುತ್ತದೆ ಎನ್ನುವುದು ಅಧಿಕಾರಿಗಳ ವಿಶ್ವಾಸ.
ಕಳೆದ ಎರಡು ವರ್ಷಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಈ ವಿಮೆ ಉಪಯುಕ್ತವಾಗಿತ್ತು. ಒಂದು ಹೆಕ್ಟೇರ್ ಅಡಿಕೆ ಬೆಳೆ ವಿಮೆಗೆ ರೈತರು ರೂ.6400,ರಾಜ್ಯ ಸರ್ಕಾರ 75% ಮತ್ತು ಕೇಂದ್ರ ಸರ್ಕಾರ 25% ಒಟ್ಟು ಮೊತ್ತ ರೂ 65,202 ಪಾವತಿಸುತ್ತದೆ.ರೈತರ ಆಪತ್ತಿಗೆ ಸರಕಾರ ತಂದ ಬೆಳೆ ವಿಮಾ ಯೋಜನೆ ನೆರವಾಗಿತ್ತು.
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…
ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…