Advertisement
ಸುದ್ದಿಗಳು

#PMFBY | ಫಾಲೋಅಪ್‌ | ಅಡಿಕೆ ಕೃಷಿಕರಿಗೆ ಫಸಲು ವಿಮಾ ಯೋಜನೆ | ಸ್ವಲ್ಪ ಕಾಯಿರಿ ಅಡಿಕೆಗೂ ಬರುತ್ತದೆ ವಿಮೆ.. |

Share

ಹವಾಮಾನ ವೈಪರೀತ್ಯದ ಕಾರಣದಿಂದ ನಾಶವಾಗುವ ಕೃಷಿಗೆ ಪರಿಹಾರವಾಗಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯ ಬಗ್ಗೆ ಈ ಬಾರಿ ಕೃಷಿಕರಲ್ಲಿ ಸಾಕಷ್ಟು ಗೊಂದಲಗಳು ಇದೆ. ಅದರಲ್ಲೂ ಅಡಿಕೆ ಬೆಳೆಗಾರರಿಗೆ ತಮ್ಮ ಬೆಳೆಗೆ ವಿಮೆ ಈ ಬಾರಿ ಇಲ್ಲ ಎನ್ನುವ ಗೊಂದಲ ಇತ್ತು. ಈಗಲೂ ಗೊಂದಲ ಮುಗಿದಿಲ್ಲ. ಆದರೆ ಅಡಿಕೆಗೂ ವಿಮೆ ಬರುತ್ತದೆ ಎನ್ನುವುದು ಅಧಿಕಾರಿಗಳ ಭರವಸೆ.

ಅಡಿಕೆಗೆ ಹವಾಮಾನ ಆಧಾರಿತ ಫಸಲು ವಿಮಾ ಯೋಜನೆ ಜಾರಿಯಲ್ಲಿದೆ. ಈ ಬಾರಿ ಜೂನ್‌ ಅಂತ್ಯವಾದರೂ ಈ ಯೋಜನೆ ಜಾರಿಯಾಗಿಲ್ಲ. ಇದೀಗ ಅಡಿಕೆ ಹೊರತುಪಡಿಸಿ ಇತರ 36 ಬೆಳೆಗಳಿಗೆ ಫಸಲ್‌ ಭೀಮಾ ಯೋಜನೆಗೆ ಚಾಲನೆ ದೊರೆತಿದೆ. ಈ ಬಾರಿ ಅಡಿಕೆಯನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆತಂಕ ಕೃಷಿಕರಲ್ಲಿತ್ತು. ಹವಾಮಾನ ವೈಪರೀತ್ಯದ ಕಾರಣದಿಂದ ಕೃಷಿಗೆ ಹಾನಿಯಾದರೆ ಸರ್ಕಾರದ ಮುಂದೆ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಬೇಕಾಗಿಲ್ಲ, ಬೆಳೆವಿಮೆಯ ಹಣ ನಿಶ್ಚಿತವಾಗಿಯೂ ಬರುವುದರಿಂದ ಕೃಷಿಕರು ಬೆಳೆ ನಷ್ಟವನ್ನು ಸುಧಾರಿಸಿಕೊಳ್ಳುತ್ತಿದ್ದರು. ಹೀಗಾಗಿ ಬೆಳೆ ವಿಮೆಯ ಕಡೆಗೆ ಈಚೆಗೆ ಹೆಚ್ಚಿನ ಕೃಷಿಕರು ಆಸಕ್ತರಾಗಿದ್ದರು. ಇದೀಗ ಸರ್ಕಾರಕ್ಕೆ ಇಲ್ಲಿ ಆಗಿರುವ ವಿಳಂಬ ಹಾಗೂ ಲೋಪದ ಬಗ್ಗೆ ಮನವರಿಕೆ ಮಾಡುವ ಕೆಲಸಗಳು ನಡೆಯುತ್ತಿದೆ. ಈ ನಡುವೆಯೇ ವಿಮಾ ಕಂಪನಿಯ ಗುರುತು ಮಾಡಲಾಗಿದ್ದು, ಮುಂದಿನ ತಿಂಗಳ ಒಳಗೆ ಪ್ರೀಮಿಯಂ ಕಟ್ಟಲು ಅವಕಾಶ ಇರುತ್ತದೆ ಎನ್ನುವುದು ಅಧಿಕಾರಿಗಳ ವಿಶ್ವಾಸ.

ಕಳೆದ ಎರಡು ವರ್ಷಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಈ ವಿಮೆ ಉಪಯುಕ್ತವಾಗಿತ್ತು. ಒಂದು ಹೆಕ್ಟೇರ್ ಅಡಿಕೆ ಬೆಳೆ ವಿಮೆಗೆ ರೈತರು ರೂ.6400,ರಾಜ್ಯ ಸರ್ಕಾರ 75% ಮತ್ತು ಕೇಂದ್ರ ಸರ್ಕಾರ 25% ಒಟ್ಟು ಮೊತ್ತ ರೂ 65,202 ಪಾವತಿಸುತ್ತದೆ.ರೈತರ ಆಪತ್ತಿಗೆ ಸರಕಾರ ತಂದ ಬೆಳೆ ವಿಮಾ ಯೋಜನೆ ನೆರವಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

50 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

58 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 hour ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

12 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago