Advertisement
ಸುದ್ದಿಗಳು

#PMFBY | ಫಾಲೋಅಪ್‌ | ಅಡಿಕೆ ಕೃಷಿಕರಿಗೆ ಫಸಲು ವಿಮಾ ಯೋಜನೆ | ಸ್ವಲ್ಪ ಕಾಯಿರಿ ಅಡಿಕೆಗೂ ಬರುತ್ತದೆ ವಿಮೆ.. |

Share

ಹವಾಮಾನ ವೈಪರೀತ್ಯದ ಕಾರಣದಿಂದ ನಾಶವಾಗುವ ಕೃಷಿಗೆ ಪರಿಹಾರವಾಗಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯ ಬಗ್ಗೆ ಈ ಬಾರಿ ಕೃಷಿಕರಲ್ಲಿ ಸಾಕಷ್ಟು ಗೊಂದಲಗಳು ಇದೆ. ಅದರಲ್ಲೂ ಅಡಿಕೆ ಬೆಳೆಗಾರರಿಗೆ ತಮ್ಮ ಬೆಳೆಗೆ ವಿಮೆ ಈ ಬಾರಿ ಇಲ್ಲ ಎನ್ನುವ ಗೊಂದಲ ಇತ್ತು. ಈಗಲೂ ಗೊಂದಲ ಮುಗಿದಿಲ್ಲ. ಆದರೆ ಅಡಿಕೆಗೂ ವಿಮೆ ಬರುತ್ತದೆ ಎನ್ನುವುದು ಅಧಿಕಾರಿಗಳ ಭರವಸೆ.

ಅಡಿಕೆಗೆ ಹವಾಮಾನ ಆಧಾರಿತ ಫಸಲು ವಿಮಾ ಯೋಜನೆ ಜಾರಿಯಲ್ಲಿದೆ. ಈ ಬಾರಿ ಜೂನ್‌ ಅಂತ್ಯವಾದರೂ ಈ ಯೋಜನೆ ಜಾರಿಯಾಗಿಲ್ಲ. ಇದೀಗ ಅಡಿಕೆ ಹೊರತುಪಡಿಸಿ ಇತರ 36 ಬೆಳೆಗಳಿಗೆ ಫಸಲ್‌ ಭೀಮಾ ಯೋಜನೆಗೆ ಚಾಲನೆ ದೊರೆತಿದೆ. ಈ ಬಾರಿ ಅಡಿಕೆಯನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆತಂಕ ಕೃಷಿಕರಲ್ಲಿತ್ತು. ಹವಾಮಾನ ವೈಪರೀತ್ಯದ ಕಾರಣದಿಂದ ಕೃಷಿಗೆ ಹಾನಿಯಾದರೆ ಸರ್ಕಾರದ ಮುಂದೆ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಬೇಕಾಗಿಲ್ಲ, ಬೆಳೆವಿಮೆಯ ಹಣ ನಿಶ್ಚಿತವಾಗಿಯೂ ಬರುವುದರಿಂದ ಕೃಷಿಕರು ಬೆಳೆ ನಷ್ಟವನ್ನು ಸುಧಾರಿಸಿಕೊಳ್ಳುತ್ತಿದ್ದರು. ಹೀಗಾಗಿ ಬೆಳೆ ವಿಮೆಯ ಕಡೆಗೆ ಈಚೆಗೆ ಹೆಚ್ಚಿನ ಕೃಷಿಕರು ಆಸಕ್ತರಾಗಿದ್ದರು. ಇದೀಗ ಸರ್ಕಾರಕ್ಕೆ ಇಲ್ಲಿ ಆಗಿರುವ ವಿಳಂಬ ಹಾಗೂ ಲೋಪದ ಬಗ್ಗೆ ಮನವರಿಕೆ ಮಾಡುವ ಕೆಲಸಗಳು ನಡೆಯುತ್ತಿದೆ. ಈ ನಡುವೆಯೇ ವಿಮಾ ಕಂಪನಿಯ ಗುರುತು ಮಾಡಲಾಗಿದ್ದು, ಮುಂದಿನ ತಿಂಗಳ ಒಳಗೆ ಪ್ರೀಮಿಯಂ ಕಟ್ಟಲು ಅವಕಾಶ ಇರುತ್ತದೆ ಎನ್ನುವುದು ಅಧಿಕಾರಿಗಳ ವಿಶ್ವಾಸ.

ಕಳೆದ ಎರಡು ವರ್ಷಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಈ ವಿಮೆ ಉಪಯುಕ್ತವಾಗಿತ್ತು. ಒಂದು ಹೆಕ್ಟೇರ್ ಅಡಿಕೆ ಬೆಳೆ ವಿಮೆಗೆ ರೈತರು ರೂ.6400,ರಾಜ್ಯ ಸರ್ಕಾರ 75% ಮತ್ತು ಕೇಂದ್ರ ಸರ್ಕಾರ 25% ಒಟ್ಟು ಮೊತ್ತ ರೂ 65,202 ಪಾವತಿಸುತ್ತದೆ.ರೈತರ ಆಪತ್ತಿಗೆ ಸರಕಾರ ತಂದ ಬೆಳೆ ವಿಮಾ ಯೋಜನೆ ನೆರವಾಗಿತ್ತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

4 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

13 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

21 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago