ಹವಾಮಾನ ವೈಪರೀತ್ಯದ ಕಾರಣದಿಂದ ನಾಶವಾಗುವ ಕೃಷಿಗೆ ಪರಿಹಾರವಾಗಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬಗ್ಗೆ ಈ ಬಾರಿ ಕೃಷಿಕರಲ್ಲಿ ಸಾಕಷ್ಟು ಗೊಂದಲಗಳು ಇದೆ. ಅದರಲ್ಲೂ ಅಡಿಕೆ ಬೆಳೆಗಾರರಿಗೆ ತಮ್ಮ ಬೆಳೆಗೆ ವಿಮೆ ಈ ಬಾರಿ ಇಲ್ಲ ಎನ್ನುವ ಗೊಂದಲ ಇತ್ತು. ಈಗಲೂ ಗೊಂದಲ ಮುಗಿದಿಲ್ಲ. ಆದರೆ ಅಡಿಕೆಗೂ ವಿಮೆ ಬರುತ್ತದೆ ಎನ್ನುವುದು ಅಧಿಕಾರಿಗಳ ಭರವಸೆ.
ಅಡಿಕೆಗೆ ಹವಾಮಾನ ಆಧಾರಿತ ಫಸಲು ವಿಮಾ ಯೋಜನೆ ಜಾರಿಯಲ್ಲಿದೆ. ಈ ಬಾರಿ ಜೂನ್ ಅಂತ್ಯವಾದರೂ ಈ ಯೋಜನೆ ಜಾರಿಯಾಗಿಲ್ಲ. ಇದೀಗ ಅಡಿಕೆ ಹೊರತುಪಡಿಸಿ ಇತರ 36 ಬೆಳೆಗಳಿಗೆ ಫಸಲ್ ಭೀಮಾ ಯೋಜನೆಗೆ ಚಾಲನೆ ದೊರೆತಿದೆ. ಈ ಬಾರಿ ಅಡಿಕೆಯನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆತಂಕ ಕೃಷಿಕರಲ್ಲಿತ್ತು. ಹವಾಮಾನ ವೈಪರೀತ್ಯದ ಕಾರಣದಿಂದ ಕೃಷಿಗೆ ಹಾನಿಯಾದರೆ ಸರ್ಕಾರದ ಮುಂದೆ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಬೇಕಾಗಿಲ್ಲ, ಬೆಳೆವಿಮೆಯ ಹಣ ನಿಶ್ಚಿತವಾಗಿಯೂ ಬರುವುದರಿಂದ ಕೃಷಿಕರು ಬೆಳೆ ನಷ್ಟವನ್ನು ಸುಧಾರಿಸಿಕೊಳ್ಳುತ್ತಿದ್ದರು. ಹೀಗಾಗಿ ಬೆಳೆ ವಿಮೆಯ ಕಡೆಗೆ ಈಚೆಗೆ ಹೆಚ್ಚಿನ ಕೃಷಿಕರು ಆಸಕ್ತರಾಗಿದ್ದರು. ಇದೀಗ ಸರ್ಕಾರಕ್ಕೆ ಇಲ್ಲಿ ಆಗಿರುವ ವಿಳಂಬ ಹಾಗೂ ಲೋಪದ ಬಗ್ಗೆ ಮನವರಿಕೆ ಮಾಡುವ ಕೆಲಸಗಳು ನಡೆಯುತ್ತಿದೆ. ಈ ನಡುವೆಯೇ ವಿಮಾ ಕಂಪನಿಯ ಗುರುತು ಮಾಡಲಾಗಿದ್ದು, ಮುಂದಿನ ತಿಂಗಳ ಒಳಗೆ ಪ್ರೀಮಿಯಂ ಕಟ್ಟಲು ಅವಕಾಶ ಇರುತ್ತದೆ ಎನ್ನುವುದು ಅಧಿಕಾರಿಗಳ ವಿಶ್ವಾಸ.
ಕಳೆದ ಎರಡು ವರ್ಷಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಈ ವಿಮೆ ಉಪಯುಕ್ತವಾಗಿತ್ತು. ಒಂದು ಹೆಕ್ಟೇರ್ ಅಡಿಕೆ ಬೆಳೆ ವಿಮೆಗೆ ರೈತರು ರೂ.6400,ರಾಜ್ಯ ಸರ್ಕಾರ 75% ಮತ್ತು ಕೇಂದ್ರ ಸರ್ಕಾರ 25% ಒಟ್ಟು ಮೊತ್ತ ರೂ 65,202 ಪಾವತಿಸುತ್ತದೆ.ರೈತರ ಆಪತ್ತಿಗೆ ಸರಕಾರ ತಂದ ಬೆಳೆ ವಿಮಾ ಯೋಜನೆ ನೆರವಾಗಿತ್ತು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…