Advertisement
ಸಾಹಿತ್ಯ

ಮಾಗುವುದು ಸಾಧನೆ ಬೀಗುವುದು ಸುಮ್ಮನೆ

Share

ಬೀಗುವಿಕೆಗಿಂತ ಮಾಗುವಿಕೆಯದು ಉತ್ತಮ
ಮಾಗಿಯೂ ಬೀಗದಿರುವಿಕೆಯು ಅತ್ಯುತ್ತಮ
ಮಾಗದೆ ಮಾಗಿರುವಂತೆ ಬೀಗುವುದು ವ್ಯಸನ
ಮಾಗದೆ ಬೀಗುವುದಕೆ ವೇಷವೇ ಸಾಧನ
ಮಾಗಿದವ ಬೀಗಲಾರ
ಬೀಗುವವ ಮಾಗಲಾರ
ಮಾಗುವುದು ಸಾಧನೆ
ಬೀಗುವುದು ಸುಮ್ಮನೆ ||

Advertisement
Advertisement

ಮಾಗಲೋಸುಗ ಕಳಚಬೇಕು ಮುಖವಾಡವನು
ಮಾಗಲೋಸುಗ ತೆರೆಯಬೇಕಂತಃಚಕ್ಷುವನು
ಮಾಗಲೋಸುಗ ಸವೆಸಬೇಕು ಕಾಯವನು
ಮಾಗಲೋಸುಗ ಬಳಸಬೇಕಂತಃಕರಣವನು
ಪಂಚಜ್ಞಾನೇಂದ್ರಿಯ ಪಂಚಕರ್ಮೇಂದ್ರಿಯಂ
ಗಳನು ಸರಿಯಾದ ಕ್ರಮದಿಂದ ಬಳಸುತಲಿ
ಧರ್ಮಮಾರ್ಗವೆ ಸಾಧುಮಾರ್ಗವೆಂದರಿತು ಸನ್ಮಾರ್ಗದಲಿ ಮನುಜ ಸಾಗುವುದು ಒಳಿತು ||

ದೇಹ ತೊಳೆಯಲು ಬೇಕು ಸ್ನಾನ
ಮನವ ತೊಳೆಯಲು ಬೇಕು ಧ್ಯಾನ
ಬುದ್ಧಿ ಬೆಳೆಯಲು ಬೇಕು ಚಿಂತನ
ಬಾಹ್ಯ ಅಭ್ಯಂತರದಿ ಪಾಲಿಸಲು ಶೌಚವನು
ತೊಲಗುವುದು ಬೇಡದಾ ಕಳೆಯು
ಹುಲುಸಾಗಿ ಬೆಳೆಯುವುದು ಬೆಳೆಯು ||

ಫಲತುಂಬಿದಾ ವೃಕ್ಷ ಬಾಗುವುದು ದಿಟವು
ಬಾಗಿದಾ ವೃಕ್ಷವದು ಮಾಗಿದ ಸಂಕೇತವು ಬಾಗಬೇಕಾದಲ್ಲಿ ಬಾಗುವಾ ಕಾಯವದು
ಬೀಗದೆಂದೆಂದೂ ಮಾಗುವುದು ದಿಟವು
ಬಾಗಬೇಕಾದದ್ದು ಕಾಯ
ಮಾಗಬೇಕಾದದ್ದು ನ್ಯಾಯ ||

ಬೀಗುವವ ಬಾಗಲಾರ
ಬಾಗದವ ಮಾಗಲಾರ
ಮಾಗಿದವ ಬೀಗಲಾರ
ಬೀಗುವವ ಮಾಗಲಾರ
ಮಾಗುವುದು ಸಾಧನೆ
ಬೀಗುವುದು ಸುಮ್ಮನೆ ||‌

✍️ ಜಯಪ್ರಕಾಶ್ ಎ ನಾಕೂರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

12 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago