Advertisement
ಸಾಹಿತ್ಯ

ಮಾಗುವುದು ಸಾಧನೆ ಬೀಗುವುದು ಸುಮ್ಮನೆ

Share

ಬೀಗುವಿಕೆಗಿಂತ ಮಾಗುವಿಕೆಯದು ಉತ್ತಮ
ಮಾಗಿಯೂ ಬೀಗದಿರುವಿಕೆಯು ಅತ್ಯುತ್ತಮ
ಮಾಗದೆ ಮಾಗಿರುವಂತೆ ಬೀಗುವುದು ವ್ಯಸನ
ಮಾಗದೆ ಬೀಗುವುದಕೆ ವೇಷವೇ ಸಾಧನ
ಮಾಗಿದವ ಬೀಗಲಾರ
ಬೀಗುವವ ಮಾಗಲಾರ
ಮಾಗುವುದು ಸಾಧನೆ
ಬೀಗುವುದು ಸುಮ್ಮನೆ ||

ಮಾಗಲೋಸುಗ ಕಳಚಬೇಕು ಮುಖವಾಡವನು
ಮಾಗಲೋಸುಗ ತೆರೆಯಬೇಕಂತಃಚಕ್ಷುವನು
ಮಾಗಲೋಸುಗ ಸವೆಸಬೇಕು ಕಾಯವನು
ಮಾಗಲೋಸುಗ ಬಳಸಬೇಕಂತಃಕರಣವನು
ಪಂಚಜ್ಞಾನೇಂದ್ರಿಯ ಪಂಚಕರ್ಮೇಂದ್ರಿಯಂ
ಗಳನು ಸರಿಯಾದ ಕ್ರಮದಿಂದ ಬಳಸುತಲಿ
ಧರ್ಮಮಾರ್ಗವೆ ಸಾಧುಮಾರ್ಗವೆಂದರಿತು ಸನ್ಮಾರ್ಗದಲಿ ಮನುಜ ಸಾಗುವುದು ಒಳಿತು ||

ದೇಹ ತೊಳೆಯಲು ಬೇಕು ಸ್ನಾನ
ಮನವ ತೊಳೆಯಲು ಬೇಕು ಧ್ಯಾನ
ಬುದ್ಧಿ ಬೆಳೆಯಲು ಬೇಕು ಚಿಂತನ
ಬಾಹ್ಯ ಅಭ್ಯಂತರದಿ ಪಾಲಿಸಲು ಶೌಚವನು
ತೊಲಗುವುದು ಬೇಡದಾ ಕಳೆಯು
ಹುಲುಸಾಗಿ ಬೆಳೆಯುವುದು ಬೆಳೆಯು ||

ಫಲತುಂಬಿದಾ ವೃಕ್ಷ ಬಾಗುವುದು ದಿಟವು
ಬಾಗಿದಾ ವೃಕ್ಷವದು ಮಾಗಿದ ಸಂಕೇತವು ಬಾಗಬೇಕಾದಲ್ಲಿ ಬಾಗುವಾ ಕಾಯವದು
ಬೀಗದೆಂದೆಂದೂ ಮಾಗುವುದು ದಿಟವು
ಬಾಗಬೇಕಾದದ್ದು ಕಾಯ
ಮಾಗಬೇಕಾದದ್ದು ನ್ಯಾಯ ||

ಬೀಗುವವ ಬಾಗಲಾರ
ಬಾಗದವ ಮಾಗಲಾರ
ಮಾಗಿದವ ಬೀಗಲಾರ
ಬೀಗುವವ ಮಾಗಲಾರ
ಮಾಗುವುದು ಸಾಧನೆ
ಬೀಗುವುದು ಸುಮ್ಮನೆ ||‌

✍️ ಜಯಪ್ರಕಾಶ್ ಎ ನಾಕೂರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

3 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

7 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

16 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

17 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

18 hours ago