Advertisement
ಸಾಹಿತ್ಯ

ಮಾಗುವುದು ಸಾಧನೆ ಬೀಗುವುದು ಸುಮ್ಮನೆ

Share

ಬೀಗುವಿಕೆಗಿಂತ ಮಾಗುವಿಕೆಯದು ಉತ್ತಮ
ಮಾಗಿಯೂ ಬೀಗದಿರುವಿಕೆಯು ಅತ್ಯುತ್ತಮ
ಮಾಗದೆ ಮಾಗಿರುವಂತೆ ಬೀಗುವುದು ವ್ಯಸನ
ಮಾಗದೆ ಬೀಗುವುದಕೆ ವೇಷವೇ ಸಾಧನ
ಮಾಗಿದವ ಬೀಗಲಾರ
ಬೀಗುವವ ಮಾಗಲಾರ
ಮಾಗುವುದು ಸಾಧನೆ
ಬೀಗುವುದು ಸುಮ್ಮನೆ ||

ಮಾಗಲೋಸುಗ ಕಳಚಬೇಕು ಮುಖವಾಡವನು
ಮಾಗಲೋಸುಗ ತೆರೆಯಬೇಕಂತಃಚಕ್ಷುವನು
ಮಾಗಲೋಸುಗ ಸವೆಸಬೇಕು ಕಾಯವನು
ಮಾಗಲೋಸುಗ ಬಳಸಬೇಕಂತಃಕರಣವನು
ಪಂಚಜ್ಞಾನೇಂದ್ರಿಯ ಪಂಚಕರ್ಮೇಂದ್ರಿಯಂ
ಗಳನು ಸರಿಯಾದ ಕ್ರಮದಿಂದ ಬಳಸುತಲಿ
ಧರ್ಮಮಾರ್ಗವೆ ಸಾಧುಮಾರ್ಗವೆಂದರಿತು ಸನ್ಮಾರ್ಗದಲಿ ಮನುಜ ಸಾಗುವುದು ಒಳಿತು ||

Advertisement

ದೇಹ ತೊಳೆಯಲು ಬೇಕು ಸ್ನಾನ
ಮನವ ತೊಳೆಯಲು ಬೇಕು ಧ್ಯಾನ
ಬುದ್ಧಿ ಬೆಳೆಯಲು ಬೇಕು ಚಿಂತನ
ಬಾಹ್ಯ ಅಭ್ಯಂತರದಿ ಪಾಲಿಸಲು ಶೌಚವನು
ತೊಲಗುವುದು ಬೇಡದಾ ಕಳೆಯು
ಹುಲುಸಾಗಿ ಬೆಳೆಯುವುದು ಬೆಳೆಯು ||

ಫಲತುಂಬಿದಾ ವೃಕ್ಷ ಬಾಗುವುದು ದಿಟವು
ಬಾಗಿದಾ ವೃಕ್ಷವದು ಮಾಗಿದ ಸಂಕೇತವು ಬಾಗಬೇಕಾದಲ್ಲಿ ಬಾಗುವಾ ಕಾಯವದು
ಬೀಗದೆಂದೆಂದೂ ಮಾಗುವುದು ದಿಟವು
ಬಾಗಬೇಕಾದದ್ದು ಕಾಯ
ಮಾಗಬೇಕಾದದ್ದು ನ್ಯಾಯ ||

Advertisement

ಬೀಗುವವ ಬಾಗಲಾರ
ಬಾಗದವ ಮಾಗಲಾರ
ಮಾಗಿದವ ಬೀಗಲಾರ
ಬೀಗುವವ ಮಾಗಲಾರ
ಮಾಗುವುದು ಸಾಧನೆ
ಬೀಗುವುದು ಸುಮ್ಮನೆ ||‌

✍️ ಜಯಪ್ರಕಾಶ್ ಎ ನಾಕೂರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

4 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

4 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

4 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

2 days ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

2 days ago