Advertisement
ಸಾಹಿತ್ಯ

ಮಾಗುವುದು ಸಾಧನೆ ಬೀಗುವುದು ಸುಮ್ಮನೆ

Share

ಬೀಗುವಿಕೆಗಿಂತ ಮಾಗುವಿಕೆಯದು ಉತ್ತಮ
ಮಾಗಿಯೂ ಬೀಗದಿರುವಿಕೆಯು ಅತ್ಯುತ್ತಮ
ಮಾಗದೆ ಮಾಗಿರುವಂತೆ ಬೀಗುವುದು ವ್ಯಸನ
ಮಾಗದೆ ಬೀಗುವುದಕೆ ವೇಷವೇ ಸಾಧನ
ಮಾಗಿದವ ಬೀಗಲಾರ
ಬೀಗುವವ ಮಾಗಲಾರ
ಮಾಗುವುದು ಸಾಧನೆ
ಬೀಗುವುದು ಸುಮ್ಮನೆ ||

ಮಾಗಲೋಸುಗ ಕಳಚಬೇಕು ಮುಖವಾಡವನು
ಮಾಗಲೋಸುಗ ತೆರೆಯಬೇಕಂತಃಚಕ್ಷುವನು
ಮಾಗಲೋಸುಗ ಸವೆಸಬೇಕು ಕಾಯವನು
ಮಾಗಲೋಸುಗ ಬಳಸಬೇಕಂತಃಕರಣವನು
ಪಂಚಜ್ಞಾನೇಂದ್ರಿಯ ಪಂಚಕರ್ಮೇಂದ್ರಿಯಂ
ಗಳನು ಸರಿಯಾದ ಕ್ರಮದಿಂದ ಬಳಸುತಲಿ
ಧರ್ಮಮಾರ್ಗವೆ ಸಾಧುಮಾರ್ಗವೆಂದರಿತು ಸನ್ಮಾರ್ಗದಲಿ ಮನುಜ ಸಾಗುವುದು ಒಳಿತು ||

ದೇಹ ತೊಳೆಯಲು ಬೇಕು ಸ್ನಾನ
ಮನವ ತೊಳೆಯಲು ಬೇಕು ಧ್ಯಾನ
ಬುದ್ಧಿ ಬೆಳೆಯಲು ಬೇಕು ಚಿಂತನ
ಬಾಹ್ಯ ಅಭ್ಯಂತರದಿ ಪಾಲಿಸಲು ಶೌಚವನು
ತೊಲಗುವುದು ಬೇಡದಾ ಕಳೆಯು
ಹುಲುಸಾಗಿ ಬೆಳೆಯುವುದು ಬೆಳೆಯು ||

ಫಲತುಂಬಿದಾ ವೃಕ್ಷ ಬಾಗುವುದು ದಿಟವು
ಬಾಗಿದಾ ವೃಕ್ಷವದು ಮಾಗಿದ ಸಂಕೇತವು ಬಾಗಬೇಕಾದಲ್ಲಿ ಬಾಗುವಾ ಕಾಯವದು
ಬೀಗದೆಂದೆಂದೂ ಮಾಗುವುದು ದಿಟವು
ಬಾಗಬೇಕಾದದ್ದು ಕಾಯ
ಮಾಗಬೇಕಾದದ್ದು ನ್ಯಾಯ ||

ಬೀಗುವವ ಬಾಗಲಾರ
ಬಾಗದವ ಮಾಗಲಾರ
ಮಾಗಿದವ ಬೀಗಲಾರ
ಬೀಗುವವ ಮಾಗಲಾರ
ಮಾಗುವುದು ಸಾಧನೆ
ಬೀಗುವುದು ಸುಮ್ಮನೆ ||‌

✍️ ಜಯಪ್ರಕಾಶ್ ಎ ನಾಕೂರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 hour ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 hour ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

14 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

15 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

15 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

20 hours ago