Advertisement
ಅನುಕ್ರಮ

ಸಸ್ಯ ಪರಿಚಯ | “ಮರಳಿ ತನ್ನಿ ಮರೆತ ಸೊಪ್ಪು”- ಪಚ್ಚೆಕದಿರು

Share

ಪಚ್ಚೆಕದಿರು ಎಂಬ ಹೆಸರುಳ್ಳ ತುಳಸಿ ಜಾತಿಗೆ ಸೇರಿದ ಈ ಗಿಡವನ್ನು ಪಚ್ಚೆತೆನೆ ಎಂದೂ ಕರೆಯುತ್ತಾರೆ. ಕದಿರು ಎಂದರೆ ತೆನೆ ಎನ್ನುವುದಿದೆ. ಇನ್ನು, ಸ್ಥಳೀಯ ತುಳು ಭಾಷೆಯಲ್ಲಿ ಪಚ್ಚೆ ಎಂದರೆ ಹಸುರು ಎಂದು ಅರ್ಥವಿದೆ. ಇದರಲ್ಲಿ ಮೂಡುವ ಹೂವು ಭತ್ತದ ತೆನೆಯಂತೆ ಇರುವುದರಿಂದ ಇದಕ್ಕೆ ಪಚ್ಚೆಕದಿರು ಎಂಬ ಹೆಸರು ಬಂದಿರಬೇಕು.

ಪಚ್ಚೆಕದಿರಿನ ಎಲೆಗಳು ಮೇಲ್ನೋಟಕ್ಕೆ ದಾಸವಾಳದ ಎಲೆಗಳನ್ನು ಹೋಲುತ್ತವೆ. ಆದರೆ ದಾಸವಾಳದ ಎಲೆಗಳನ್ನು ಹಿಸುಕಿದಾಗ ಲೋಳೆ ಬರುವಂತೆ ಪಚ್ಚೆಕದಿರಿನ ಎಲೆಗಳಿಂದ ಲೋಳೆ ಬರುವುದಿಲ್ಲ. ದಾಸವಾಳದ ಎಲೆಗಳ ಬದಿಯಲ್ಲಿ ತುಂಬಾ ಕತ್ತರಿ ಕತ್ತರಿ ಇರುವಂತೆ ಪಚ್ಚೆಕದಿರಿನ ಎಲೆಗಳು ತುಂಬಾ ಕತ್ತರಿ ಆಕಾರದಲ್ಲಿ ಇಲ್ಲ. ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು pogastemon cablin ಎಂದು. ಇದರ  ಎಲೆಗಳು ವಿಶಿಷ್ಟ ಪರಿಮಳ ಹೊಂದಿರುತ್ತವೆ. ಅಂಗೈಯಲ್ಲಿ ಇದರ ಎಲೆಗಳನ್ನು ಹಿಸುಕಿದಾಗ ಒಳ್ಳೆಯ ಸುಗಂಧ  ಹೊರಸೂಸುತ್ತದೆ.  ಈ ವಿಶಿಷ್ಟ ರೀತಿಯ ಸುಗಂಧದಿಂದಾಗಿ ಇದು ಎಲ್ಲರಿಗೂ ಇಷ್ಟವಾಗುತ್ತದೆ.  ಅರೋಮಾ ಚಿಕಿತ್ಸೆಯಲ್ಲಿ ಇದರ ಸೊಪ್ಪನ್ನು ಸುಗಂಧಕಾರಕವಾಗಿ ಬಳಸುತ್ತಾರೆ. ಕೂದಲಿನ ಆರೋಗ್ಯಕ್ಕೆ ಎಣ್ಣೆ ತಯಾರಿಸಲು  ಗರ್ಗ, ತುಳಸಿ, ದಾಸವಾಳದ ಎಲೆ, ನೆಲ್ಲಿ ಎಲೆಗಳ ಜತೆ ಈ ಸೊಪ್ಪನ್ನು ವಿಶೇಷವಾಗಿ ಬಳಸಲಾಗುತ್ತದೆ. ಅಲ್ಲದೆ ಚರ್ಮದ ಆರೋಗ್ಯ ಕಾಪಾಡುವಲ್ಲಿಯೂ ಪಚ್ಚೆಕದಿರಿನ ಸೊಪ್ಪಿನ ರಸವನ್ನು ಉಪಯೋಗಿಸುವ ಕ್ರಮ ಇದೆ. ಇದರ ಎಣ್ಣೆಯನ್ನು ಮೈ ಕೈಗಳಿಗೆ ಸವರಿಕೊಂಡರೆ ಸೊಳ್ಳೆಗಳು ದೂರ ಹೋಗುತ್ತವೆ.

ಈ ಗಿಡವು ಔಷಧೀಯ ಗಿಡವೂ ಹೌದು. ಇದರ ಎಲೆಗಳನ್ನು ಅಸ್ತಮಾ, ಕೆಮ್ಮು, ಕಫ ಮುಂತಾದ ಶ್ವಾಸಕೋಶದ ಕಾಯಿಲೆಗಳಿಗೆ ಕಷಾಯ ರೂಪದಲ್ಲಿ ಸೇವಿಸುವ ಕ್ರಮವಿದೆ. ಅಲ್ಲದೆ ಜ್ವರ, ತಲೆನೋವು ಮುಂತಾಗಿ ಕಾಯಿಲೆಗಳನ್ನು ಹಾಗೂ  ಮೂತ್ರಕೋಶದ ಕಲ್ಲುಗಳ ಸಮಸ್ಯೆಯನ್ನು ಈ ಕಷಾಯ ಸೇವನೆಯು ನಿವಾರಿಸುತ್ತದೆ. ಹೊಟ್ಟೆನೋವು, diarrhea, constipation ನಂತಹ ಜಠರ ಸಂಬಂಧಿ ರೋಗಗಳು ಬಾರದಂತೆ ಈ ಸೊಪ್ಪಿನ ಕಷಾಯವನ್ನು  ಬಳಸುತ್ತೇವೆ. ಈ ಸೊಪ್ಪಿನ ರಸವು Vitamin ಮತ್ತು zinc ಸತ್ವವನ್ನು ಹೊಂದಿರುವ ಕಾರಣ ಇದರ ಸೇವನೆಯಿಂದ ದೇಹದ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆ.

ದೇವರ ಪೂಜೆಗೆ ಪಚ್ಚೆಕದಿರಿನ ಹೂಗಳನ್ನು ಬಳಸಲಾಗುತ್ತದೆ. ಹಿಂದಿನ ಕಾಲದಲ್ಲಿ ಇದರ ಎಲೆಗಳನ್ನು ಉರಿಸಿ ವಾತಾವರಣವನ್ನು ಶುದ್ಧಿಗೊಳಿಸಿ  ವಿದ್ಯಾರ್ಥಿಗಳ ಏಕಾಗ್ರತೆಯನ್ನು ಹೆಚ್ಚಿಸಲಾಗುತ್ತಿತ್ತು ಎಂಬ ಮಾಹಿತಿ ಗೂಗಲ್‍ನಲ್ಲಿ ಇದೆ.

ಪಚ್ಚೆಕದಿರಿನ ಗಿಡಗಳನ್ನು ಬೆಳೆಸುವುದು ಕಷ್ಟವಲ್ಲ. ಚಿಕ್ಕ ಗೆಲ್ಲುಗಳನ್ನು ನೆಟ್ಟು ಹೊಸ ಗಿಡಗಳನ್ನು ಮಾಡಬಹುದಾಗಿದೆ. ನಗರಗಳ ಟೆರೇಸ್‍ಗಳಲ್ಲಿ ಸಣ್ಣ ಪಾಟ್‍ಗಳಲ್ಲಿ ಇವುಗಳನ್ನು ಸುಪುಷ್ಟವಾಗಿ ಬೆಳೆಸಬಹುದು.  ಗಿಡವು ಚಿಗುರಿ ಮೂರು ತಿಂಗಳಲ್ಲಿ ಪುಟ್ಟ ಪುಟ್ಟ ಬಿಳಿ ಹೂಗಳನ್ನು  ಕದಿರಿನಾಕಾರದಲ್ಲಿ ಅರಳಿಸುತ್ತದೆ. ಹೂವಿನ ಸೌಂದರ್ಯ ಮತ್ತು ಎಲೆಗಳ ಸುಗಂಧವು ಒಟ್ಟಾಗಿ ಪಚ್ಚೆಕದಿರಿನ ಮೌಲ್ಯ ಹೆಚ್ಚಿಸಿವೆ.  ಪಚ್ಚೆ ಕದಿರಿನ ಗಿಡಗಳನ್ನು ಮನೆಯ ಸುತ್ತಮುತ್ತಲಲ್ಲಿ ಬೆಳೆಸಿ ಸ್ವಚ್ಛ, ಶುದ್ಧ, ಆಮ್ಲಜನಕಯುಕ್ತ ಗಾಳಿಯ ಮೂಲಕ ನಮ್ಮ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಜಯಲಕ್ಷ್ಮಿ ದಾಮ್ಲೆ

ಜಯಲಕ್ಷ್ಮಿ ದಾಮ್ಲೆ ಅವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕೆಲಸ ಮಾಡುತ್ತಿದ್ದಾರೆ. ಪರಿಸರ ಸಂಬಂಧಿತ ಬರಹ, ಅಧ್ಯಯನದಲ್ಲಿ ಆಸಕ್ತಿ ಹೊಂದಿದ್ದಾರೆ.

Published by
ಜಯಲಕ್ಷ್ಮಿ ದಾಮ್ಲೆ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

4 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

10 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

10 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago