ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ ವಿಷದ ಅಂಶ ಸೇರ್ಪಡೆಯಾಗಿದ್ದು ನೂರಾರು ಮೀನುಗಳು ಸಾವನಪ್ಪಿವೆ. ನದಿಯ ದಡದಲ್ಲಿ ಸುಮಾರು 2 ಕಿಲೋ ಮೀಟರ್ ದೂರದವರೆಗೂ ಸಾವನಪ್ಪಿರುವ ಮೀನುಗಳು ತೇಲುತಿದ್ದು ಯಾರೋ ಕಿಡಿಗೇಡಿಗಳು ವಿಷದ ರಾಸಾಯನಿಕ ನದಿಗೆ ಹಾಕಿ ಮೀನುಗಳನ್ನು ಸಾವನ್ನಪ್ಪಿರುವ ಸಾಧ್ಯತೆ ಇರಬಹುದು ಎಂದು ಸ್ಥಳಿಯರು ತಿಳಿಸಿದ್ದಾರೆ. ಅಲ್ಲದೇ ನದಿ ನೀರು ಹರಿದು ಹಾಸನ ಜಿಲ್ಲೆ ಗೊರೂರು ಜಲಾಶಯ ಸೇರುತ್ತದೆ ನಡುವೆ ಸಾಕಷ್ಟು ಜನರು ನೀರನ್ನು ಬಳಸುತ್ತಾರೆ. ಜಲಚರಗಳಿಗೂ ತೊಂದರೆಯಾಗುತ್ತದೆ ಸಂಬಂದಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಣಕಲ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮೀನು ಹಿಡಿಯಲು ಅಡಿಕೆಗೆ ಬಳಸಲು ಮೈಲುತುತ್ತವನ್ನು ನದಿಯಲ್ಲಿ ಮಿಶ್ರಣ ಮಾಡಿರುವ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಮಲೆನಾಡಿಗರ ಜೀವನದಿಯಾಗಿರುವ ಹೇಮಾವತಿ ನದಿಯ ನೀರು ಕಲುಷಿತಗೊಳ್ಳುತ್ತಿದೆ. ಕುಡಿಯಲು ಕೂಡ ಇದೆ ನೀರನ್ನು ಉಪಯೋಗಿಸುವುದರಿಂದ ಎಚ್ಚರಿಕೆ ಅಗತ್ಯವಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…