ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ ವಿಷದ ಅಂಶ ಸೇರ್ಪಡೆಯಾಗಿದ್ದು ನೂರಾರು ಮೀನುಗಳು ಸಾವನಪ್ಪಿವೆ. ನದಿಯ ದಡದಲ್ಲಿ ಸುಮಾರು 2 ಕಿಲೋ ಮೀಟರ್ ದೂರದವರೆಗೂ ಸಾವನಪ್ಪಿರುವ ಮೀನುಗಳು ತೇಲುತಿದ್ದು ಯಾರೋ ಕಿಡಿಗೇಡಿಗಳು ವಿಷದ ರಾಸಾಯನಿಕ ನದಿಗೆ ಹಾಕಿ ಮೀನುಗಳನ್ನು ಸಾವನ್ನಪ್ಪಿರುವ ಸಾಧ್ಯತೆ ಇರಬಹುದು ಎಂದು ಸ್ಥಳಿಯರು ತಿಳಿಸಿದ್ದಾರೆ. ಅಲ್ಲದೇ ನದಿ ನೀರು ಹರಿದು ಹಾಸನ ಜಿಲ್ಲೆ ಗೊರೂರು ಜಲಾಶಯ ಸೇರುತ್ತದೆ ನಡುವೆ ಸಾಕಷ್ಟು ಜನರು ನೀರನ್ನು ಬಳಸುತ್ತಾರೆ. ಜಲಚರಗಳಿಗೂ ತೊಂದರೆಯಾಗುತ್ತದೆ ಸಂಬಂದಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಣಕಲ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮೀನು ಹಿಡಿಯಲು ಅಡಿಕೆಗೆ ಬಳಸಲು ಮೈಲುತುತ್ತವನ್ನು ನದಿಯಲ್ಲಿ ಮಿಶ್ರಣ ಮಾಡಿರುವ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಮಲೆನಾಡಿಗರ ಜೀವನದಿಯಾಗಿರುವ ಹೇಮಾವತಿ ನದಿಯ ನೀರು ಕಲುಷಿತಗೊಳ್ಳುತ್ತಿದೆ. ಕುಡಿಯಲು ಕೂಡ ಇದೆ ನೀರನ್ನು ಉಪಯೋಗಿಸುವುದರಿಂದ ಎಚ್ಚರಿಕೆ ಅಗತ್ಯವಿದೆ.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…