ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ ವಿಷದ ಅಂಶ ಸೇರ್ಪಡೆಯಾಗಿದ್ದು ನೂರಾರು ಮೀನುಗಳು ಸಾವನಪ್ಪಿವೆ. ನದಿಯ ದಡದಲ್ಲಿ ಸುಮಾರು 2 ಕಿಲೋ ಮೀಟರ್ ದೂರದವರೆಗೂ ಸಾವನಪ್ಪಿರುವ ಮೀನುಗಳು ತೇಲುತಿದ್ದು ಯಾರೋ ಕಿಡಿಗೇಡಿಗಳು ವಿಷದ ರಾಸಾಯನಿಕ ನದಿಗೆ ಹಾಕಿ ಮೀನುಗಳನ್ನು ಸಾವನ್ನಪ್ಪಿರುವ ಸಾಧ್ಯತೆ ಇರಬಹುದು ಎಂದು ಸ್ಥಳಿಯರು ತಿಳಿಸಿದ್ದಾರೆ. ಅಲ್ಲದೇ ನದಿ ನೀರು ಹರಿದು ಹಾಸನ ಜಿಲ್ಲೆ ಗೊರೂರು ಜಲಾಶಯ ಸೇರುತ್ತದೆ ನಡುವೆ ಸಾಕಷ್ಟು ಜನರು ನೀರನ್ನು ಬಳಸುತ್ತಾರೆ. ಜಲಚರಗಳಿಗೂ ತೊಂದರೆಯಾಗುತ್ತದೆ ಸಂಬಂದಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಣಕಲ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮೀನು ಹಿಡಿಯಲು ಅಡಿಕೆಗೆ ಬಳಸಲು ಮೈಲುತುತ್ತವನ್ನು ನದಿಯಲ್ಲಿ ಮಿಶ್ರಣ ಮಾಡಿರುವ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಮಲೆನಾಡಿಗರ ಜೀವನದಿಯಾಗಿರುವ ಹೇಮಾವತಿ ನದಿಯ ನೀರು ಕಲುಷಿತಗೊಳ್ಳುತ್ತಿದೆ. ಕುಡಿಯಲು ಕೂಡ ಇದೆ ನೀರನ್ನು ಉಪಯೋಗಿಸುವುದರಿಂದ ಎಚ್ಚರಿಕೆ ಅಗತ್ಯವಿದೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…