ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ ವಿಷದ ಅಂಶ ಸೇರ್ಪಡೆಯಾಗಿದ್ದು ನೂರಾರು ಮೀನುಗಳು ಸಾವನಪ್ಪಿವೆ. ನದಿಯ ದಡದಲ್ಲಿ ಸುಮಾರು 2 ಕಿಲೋ ಮೀಟರ್ ದೂರದವರೆಗೂ ಸಾವನಪ್ಪಿರುವ ಮೀನುಗಳು ತೇಲುತಿದ್ದು ಯಾರೋ ಕಿಡಿಗೇಡಿಗಳು ವಿಷದ ರಾಸಾಯನಿಕ ನದಿಗೆ ಹಾಕಿ ಮೀನುಗಳನ್ನು ಸಾವನ್ನಪ್ಪಿರುವ ಸಾಧ್ಯತೆ ಇರಬಹುದು ಎಂದು ಸ್ಥಳಿಯರು ತಿಳಿಸಿದ್ದಾರೆ. ಅಲ್ಲದೇ ನದಿ ನೀರು ಹರಿದು ಹಾಸನ ಜಿಲ್ಲೆ ಗೊರೂರು ಜಲಾಶಯ ಸೇರುತ್ತದೆ ನಡುವೆ ಸಾಕಷ್ಟು ಜನರು ನೀರನ್ನು ಬಳಸುತ್ತಾರೆ. ಜಲಚರಗಳಿಗೂ ತೊಂದರೆಯಾಗುತ್ತದೆ ಸಂಬಂದಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಣಕಲ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮೀನು ಹಿಡಿಯಲು ಅಡಿಕೆಗೆ ಬಳಸಲು ಮೈಲುತುತ್ತವನ್ನು ನದಿಯಲ್ಲಿ ಮಿಶ್ರಣ ಮಾಡಿರುವ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಮಲೆನಾಡಿಗರ ಜೀವನದಿಯಾಗಿರುವ ಹೇಮಾವತಿ ನದಿಯ ನೀರು ಕಲುಷಿತಗೊಳ್ಳುತ್ತಿದೆ. ಕುಡಿಯಲು ಕೂಡ ಇದೆ ನೀರನ್ನು ಉಪಯೋಗಿಸುವುದರಿಂದ ಎಚ್ಚರಿಕೆ ಅಗತ್ಯವಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…